ವಾರ್ಡ್ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಇದ್ದರೆ, ಖಾಸಗಿ ಶಾಲೆಗೆ ಪ್ರವೇಶ ಇಲ್ಲ ಎಂದು ತಿದ್ದುಪಡಿ ನಿಯಮ ಹೇಳುತ್ತದೆ. ಪರಿಣಾಮ ಯಾವೊಬ್ಬ ಬಡ ವಿದ್ಯಾರ್ಥಿಗೂ ಖಾಸಗಿ ಶಾಲೆಯಲ್ಲಿ ಪ್ರವೇಶ ಸಿಗುತ್ತಿಲ್ಲ. ಉತ್ತಮ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಿಸಬಹುದು ಎಂಬ ಬಡ ಪೋಷಕರ ಕನಸಿಗೆ ಸರ್ಕಾರ ತಣ್ಣೀರೆರಚಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.