ಶಾಸಕ ಬೈರತಿ ಸುರೇಶ್, ‘ಲಾಭದ ನಿರೀಕ್ಷೆ ಇಲ್ಲದೆ ಮಕ್ಕಳಿಗೆ ಶಿಕ್ಷಣ ತರಬೇತಿ ನೀಡುವ ಸಂಸ್ಥೆಗಳು ಬೆರಳೆಣಿಕೆಯಷ್ಟು ಮಾತ್ರ. ಅಂತಹ ಸಂಸ್ಥೆಗಳಲ್ಲಿ ಕಬೀರ್ ಟ್ರಸ್ಟ್ ಮೊದಲ ಸ್ಥಾನದಲ್ಲಿದೆ. ಮಕ್ಕಳಿಗೆ ತರಬೇತಿ ನೀಡಲು ಕಟ್ಟಡದ ಕೊರತೆಯಿದೆ ಎಂದುಟ್ರಸ್ಟ್ ಮುಖ್ಯಸ್ಥರು ತಿಳಿಸಿದ್ದಾರೆ. ಸರ್ಕಾರ ಮತ್ತು ಶಾಸಕರ ನಿಧಿಯಿಂದ ₹20 ಲಕ್ಷ ಕೊಡಿಸುತ್ತೇನೆ’ ಎಂದು ಭರವಸೆ ನೀಡಿದರು.