ಈ ಕುರಿತು ಶುಕ್ರವಾರ ಬಿಬಿಎಂಪಿ ಅಧಿಕಾರಿಗಳು ಹಾಗೂ ಹಂದಿ ಸಾಕಾಣಿಕೆದಾರರ ಸಭೆ ನಡೆಸಿದ ಎನ್ಜಿಟಿಯ ರಾಜ್ಯಮಟ್ಟದ ಕಸ ನಿರ್ವಹಣೆ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷ, ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ, ‘ಹಸಿ ತ್ಯಾಜ್ಯ ನಿರ್ವಹಣೆ ಬಿಬಿಎಂಪಿಗೆ ಸವಾಲಾಗಿದ್ದರೆ, ಹಂದಿಗಳಿಗೆ ಆಹಾರ ಕೊರತೆ ಉಂಟಾಗಿರುವುದು ಸಾಕಾಣಿಕೆದಾರರಿಗೂ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಎರಡು–ಮೂರು ದಿನದಲ್ಲಿ ಸೂಕ್ತ ನೀತಿ ರೂಪಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.