ರಾಷ್ಟ್ರೋತ್ಥಾನ ಪರಿಷತ್ನ ಮಾರ್ಗದರ್ಶಕ ಗಣಪತಿ ಹೆಗಡೆ ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಅಭಿಯಾನಕ್ಕೆ 600ಕ್ಕೂ ಹೆಚ್ಚು ಸಂಘಸಂಸ್ಥೆಗಳು ಕೈ ಜೋಡಿಸಿದ್ದು, ಅರಣ್ಯ ಮತ್ತು ತೋಟಗಾರಿಕೆ ಇಲಾಖೆಗಳು ಗಿಡಗಳನ್ನು ಒದಗಿಸಲಿದೆ. ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಗಿಡಗಳನ್ನು ನೆಡಲಾಗುತ್ತದೆ’ ಎಂದರು.