<p><strong>ಬೆಂಗಳೂರು:</strong> ಆರ್.ಟಿ.ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾನ್ಸ್ಟೆಬಲ್ ಕೊಟ್ರೇಶ್ (39) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಅಶೋಕನಗರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಟ್ರೇಶ್, ನಾಗರಬಾವಿಯಲ್ಲಿ ವಾಸವಿದ್ದಾರೆ.</p>.<p>ಸ್ನೇಹಿತರನ್ನು ಭೇಟಿಯಾಗಲು ಯಲಹಂಕಕ್ಕೆ ಹೋಗಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ.</p>.<p>‘ಕೊಟ್ರೇಶ್ ಅವರ ಬೈಕ್ಗೆ ಅಪರಿಚಿತ ವಾಹನದೊಂದು ಡಿಕ್ಕಿ ಹೊಡೆದಿದೆ. ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.</p>.<p>ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ’ ಎಂದು ಆರ್.ಟಿ.ನಗರ ಸಂಚಾರ ಪೊಲೀಸರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್.ಟಿ.ನಗರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಕಾನ್ಸ್ಟೆಬಲ್ ಕೊಟ್ರೇಶ್ (39) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಅಶೋಕನಗರ ಸಂಚಾರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಟ್ರೇಶ್, ನಾಗರಬಾವಿಯಲ್ಲಿ ವಾಸವಿದ್ದಾರೆ.</p>.<p>ಸ್ನೇಹಿತರನ್ನು ಭೇಟಿಯಾಗಲು ಯಲಹಂಕಕ್ಕೆ ಹೋಗಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ.</p>.<p>‘ಕೊಟ್ರೇಶ್ ಅವರ ಬೈಕ್ಗೆ ಅಪರಿಚಿತ ವಾಹನದೊಂದು ಡಿಕ್ಕಿ ಹೊಡೆದಿದೆ. ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.</p>.<p>ಸ್ಥಳೀಯರೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ’ ಎಂದು ಆರ್.ಟಿ.ನಗರ ಸಂಚಾರ ಪೊಲೀಸರು ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>