ಬೆಂಗಳೂರು: ‘ಬಸವ ಕೇಂದ್ರ ಹಾಗೂ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ವತಿಯಿಂದ ಇದೇ 13ರಂದು ನಡೆಯಲಿರುವ ‘ಡಾ.ಶಿವಮೂರ್ತಿ ಮುರುಘಾ ಶರಣರ ಪುಸ್ತಕೋತ್ಸವ’ದಲ್ಲಿ 20 ಪುಸ್ತಕಗಳು ಬಿಡುಗಡೆಯಾಗಲಿವೆ’ ಎಂದುಗಚ್ಚಿನಮಠದ ಶಿವಬಸವ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮ ಸಂಜೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆಯಲಿದೆ. 20 ಪುಸ್ತಕಗಳನ್ನುಸಾಹಿತಿ ಚಂದ್ರಶೇಖರ ಕಂಬಾರ ಬಿಡುಗಡೆ ಮಾಡಲಿದ್ದಾರೆ’ ಎಂದು ತಿಳಿಸಿದರು.