ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಮೂಲಕ ಪ್ರಿಯಾಂಕ ಉಪೇಂದ್ರ ಹುಟ್ಟು ಹಬ್ಬ ಆಚರಣೆ

Last Updated 12 ನವೆಂಬರ್ 2018, 19:14 IST
ಅಕ್ಷರ ಗಾತ್ರ

ಬೆಂಗಳೂರು: ಕಾಲು ಕಳೆದುಕೊಂಡವರಿಗೆ ರೌಂಡ್‌ ಟೇಬಲ್‌ ಇಂಡಿಯಾ ಮತ್ತು ಲೇಡಿಸ್‌ ಸರ್ಕಲ್‌ ವತಿಯಿಂದ ಕೃತಕ ಕಾಲು ಜೋಡಣೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

‘ಒಂದು ಸಾವಿರ ರೂಪಾಯಿ ದೇಣಿಗೆ ನೀಡಲು ಮುಂದೆ ಬನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಿದ ಆಂದೋಲನದಿಂದ₹ 8.5 ಲಕ್ಷ ಹಣವನ್ನು ಈ ಉದ್ದೇಶಕ್ಕಾಗಿ ಬಳಕೆ ಮಾಡಲಾಗುತ್ತಿದೆ.

ಭಗವಾನ್‌ ಜೈನ್‌ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.‘ಸಂಗ್ರಹವಾದ ಹಣದಿಂದ 800 ಜನರಿಗೆ ಕೃತಕ ಕಾಲು ಜೋಡಣೆ ಮಾಡಬಹುದು’ ಎಂದರು.

ಲೇಡಿಸ್‌ ಸರ್ಕಲ್‌ ಸಂಸ್ಥೆ ಮುಖ್ಯಸ್ಥೆ ಆರತಿ ಗುಪ್ತಾ, ‘ಅಶಕ್ತರನ್ನು ಸಬಲೀಕರಣ ಮಾಡುವ ಉದ್ದೇಶಕ್ಕೆ ಸಾಕಷ್ಟು ಮಂದಿ ದೇಣಿಗೆ ನೀಡಿದ್ದಾರೆ’ ಎಂದರು.

ರೋಟರಿ ಸಂಸ್ಥೆಯ ಧೀರಜ್‌ ಬಜಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT