<p><strong>ಬೆಂಗಳೂರು:</strong> ಗಿರಿನಗರದ ವಿವೇಕಾ ನಂದ ಉದ್ಯಾನದ ಬಳಿಯಿರುವ ವಾಲಿಬಾಲ್ ಮೈದಾನದಲ್ಲಿ ಪೊಲೀಸ್ ಠಾಣೆ ನಿರ್ಮಾಣ ವಿರೋಧಿಸಿ ಅಲ್ಲಿನ ನಿವಾಸಿಗಳು ಮತ್ತು ಮಕ್ಕಳು ಶುಕ್ರವಾರ ಪ್ರತಿಭಟನೆ ಮಾಡಿದರು.</p>.<p>‘35 ವರ್ಷಗಳಿಂದ ಈ ಮೈದಾನವನ್ನು ಉಪಯೋಗಿಸುತ್ತಿದ್ದೇವೆ. ಮಕ್ಕಳು ಆಟವಾಡಲು ಇರುವುದೊಂದೇ ಜಾಗ. ಇದನ್ನೂ ನಾಶ ಮಾಡಿದರೆ ಮಕ್ಕಳಿಗೆ ಕ್ರೀಡಾಂಗಣ ಇಲ್ಲದಂತಾಗುತ್ತದೆ. ನಮಗೂ ಠಾಣೆಯ ಅಗತ್ಯವಿದೆ. ಆದರೆ, ಮೈದಾನದ ಜಾಗವನ್ನು ಬಿಟ್ಟು ಬೇರೆ ಎಲ್ಲಾದರೂ ನಿರ್ಮಿಸಿ’ ಎಂದು ಸ್ಥಳೀಯರು ಒತ್ತಾಯಿಸಿದರು.</p>.<p>‘ಮಾದರಿ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಇದು ಗೊತ್ತಿದ್ದರೂ ಅಧಿಕಾರಿಗಳು ಉಲ್ಲಂಘನೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಪೊಲೀಸ್ ಕಮಿಷನರ್ ಟಿ.ಸುನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಅವರು ತಿಳಿಸಿದ್ದಾರೆ. ಬೇರೆ ಜಾಗದಲ್ಲಿ ಠಾಣೆ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಿರಿನಗರದ ವಿವೇಕಾ ನಂದ ಉದ್ಯಾನದ ಬಳಿಯಿರುವ ವಾಲಿಬಾಲ್ ಮೈದಾನದಲ್ಲಿ ಪೊಲೀಸ್ ಠಾಣೆ ನಿರ್ಮಾಣ ವಿರೋಧಿಸಿ ಅಲ್ಲಿನ ನಿವಾಸಿಗಳು ಮತ್ತು ಮಕ್ಕಳು ಶುಕ್ರವಾರ ಪ್ರತಿಭಟನೆ ಮಾಡಿದರು.</p>.<p>‘35 ವರ್ಷಗಳಿಂದ ಈ ಮೈದಾನವನ್ನು ಉಪಯೋಗಿಸುತ್ತಿದ್ದೇವೆ. ಮಕ್ಕಳು ಆಟವಾಡಲು ಇರುವುದೊಂದೇ ಜಾಗ. ಇದನ್ನೂ ನಾಶ ಮಾಡಿದರೆ ಮಕ್ಕಳಿಗೆ ಕ್ರೀಡಾಂಗಣ ಇಲ್ಲದಂತಾಗುತ್ತದೆ. ನಮಗೂ ಠಾಣೆಯ ಅಗತ್ಯವಿದೆ. ಆದರೆ, ಮೈದಾನದ ಜಾಗವನ್ನು ಬಿಟ್ಟು ಬೇರೆ ಎಲ್ಲಾದರೂ ನಿರ್ಮಿಸಿ’ ಎಂದು ಸ್ಥಳೀಯರು ಒತ್ತಾಯಿಸಿದರು.</p>.<p>‘ಮಾದರಿ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಇದು ಗೊತ್ತಿದ್ದರೂ ಅಧಿಕಾರಿಗಳು ಉಲ್ಲಂಘನೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಪೊಲೀಸ್ ಕಮಿಷನರ್ ಟಿ.ಸುನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಅವರು ತಿಳಿಸಿದ್ದಾರೆ. ಬೇರೆ ಜಾಗದಲ್ಲಿ ಠಾಣೆ ನಿರ್ಮಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>