ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಳೂರು ಗೋಪಾಲ ಕೃಷ್ಣ ವಿರುದ್ಧ ಪ್ರತಿಭಟನೆ

Last Updated 6 ಮಾರ್ಚ್ 2019, 9:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುಂಡಿಕ್ಕಿ ಕೊಲ್ಲಿ ಎಂದ ಹೇಳಿಕೆ ನೀಡಿರುವ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ವಿರುದ್ಧ ಪೂರ್ವ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ದೇಶದ ಪ್ರಧಾನಿಯನ್ನೇ ಕೊಲ್ಲಿ ಎಂದು ಹೇಳಿಕೆ ನೀಡಿರುವ ಬೇಳೂರು ಗೋಪಾಲ ಕೃಷ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಸ್ವಂ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಭು ನವಲಗುಂದಮಠ ಮಾತನಾಡಿ, ಬೇಳೂರು ಗೋಪಾಲ ಕೃಷ್ಣ ಅವರು ನಮ್ಮದೇ ಪಕ್ಷದಿಂದ ಶಾಸಕರಾಗಿದ್ದರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಿರುವ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಮಾನ ಮರ್ಯಾದೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಮಾರಿದ್ದಾರೆ ಎಂದು ಟೀಕಿಸಿದರು.

ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಿವು ಮೆಣಸಿನ ಕಾಯಿ ಹಾಗೂ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT