ಗುಡ್ಡದ ತಪ್ಪಲು ಪ್ರದೇಶದ ಮಧ್ಯಭಾಗದಲ್ಲಿ ಸುಮಾರು 200 ಮೀಟರ್ ಉದ್ದದಲ್ಲಿ ಭೂಮಿ ಬಿರುಕು ಬಿಟ್ಟಿದೆ. ಅಲ್ಲದೆ ಮೇಲಿನ ಭಾಗದಲ್ಲಿಯೂ ಅಡ್ಡ ಮತ್ತು ನೇರವಾಗಿ ಬಿರುಕು ಬಿಟ್ಟಿತ್ತು. ಅಲ್ಲಿನ ಮೊಗೇರ್ಕಳ ಗರಡಿಯ ಬಳಿ ಮಣ್ಣಿನ ಅಡಿಭಾಗದಿಂದ ಮಣ್ಣುಮಿಶ್ರಿತ ನೀರು ಮೇಲೆದ್ದು, ಕೆಳಭಾಗಕ್ಕೆ ಹರಿದು ಹೋಗುತ್ತಿದ್ದು, ಇಲ್ಲಿನ ಸ್ಥಿತಿಯು ಮಡಿಕೇರಿ ದುರಂತವನ್ನು ನೆನಪು ಮಾಡುವಂತೆ ಇರುವುದು ಭೀತಿ ಮೂಡಿಸಿದೆ ಎಂದು ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.