ರಾಯಚೂರು ಲೋಕಸಭೆ ಕ್ಷೇತ್ರ ಆರಂಭದಿಂದಲೂ ಕಾಂಗ್ರೆಸ್ನ ಭದ್ರಕೋಟೆ. ಜೆಡಿಎಸ್ ಹಾಗೂ ಬಿಜೆಪಿಗಳಿಗೆ ತಲಾ ಒಮ್ಮೆ ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.
2008ರಲ್ಲಿ ಕ್ಷೇತ್ರ ವಿಂಗಡಣೆ ಬಳಿಕ ಯಾದಗಿರಿ ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳು ಇದರ ವ್ಯಾಪ್ತಿಗೆ ಬಂದಿವೆ. ರಾಯಚೂರಿನ ಮಸ್ಕಿ ಮತ್ತು ಸಿಂಧನೂರು ವಿಧಾನಸಭಾ ಕ್ಷೇತ್ರಗಳು ಕೊಪ್ಪಳ ಲೋಕಸಭಾ ವ್ಯಾಪ್ತಿಗೆ ಸೇರ್ಪಡೆಯಾಗಿವೆ. ಕಾಂಗ್ರೆಸ್ನಿಂದ ಈ ಸಲವೂ ಬಿ.ವಿ.ನಾಯಕ ಸ್ಪರ್ಧಿಸುವುದು ಖಚಿತವಾಗಿದೆ.
ಜೆಡಿಎಸ್–ಕಾಂಗ್ರೆಸ್ ಹೊಂದಾಣಿಕೆಯಾದರೆ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ನೇರ ಹಣಾಹಣಿ ಏರ್ಪಡಲಿದೆ. ಬಿಜೆಪಿಯಿಂದ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಪಕ್ಷ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.