ಮಡಿಕೇರಿ: ಕೊಡಗು ಜಿಲ್ಲೆಯ ಗೋಣಿಕೊಪ್ಪಲು ಸುತ್ತಮುತ್ತ ಬುಧವಾರ ಸಂಜೆ ಧಾರಾಕಾರ ಮಳೆ ಸುರಿಯಿತು. ಶ್ರೀಮಂಗಲ, ಪೊನ್ನಂಪೇಟೆ, ಕುಟ್ಟ ಭಾಗದಲ್ಲಿ ಜೋರು ಮಳೆ ಬಿತ್ತು.
ಬಿಳಿಗಿರಿರಂಗನ ಬೆಟ್ಟದಲ್ಲಿ ಮಳೆ:ಯಳಂದೂರು ತಾಲ್ಲೂಕು ಬಿಳಿಗಿರಿರಂಗನಬೆಟ್ಟದಲ್ಲಿ ಬುಧವಾರ ಮಧ್ಯಾಹ್ನ ಮಳೆ ಆಗಿದೆ. ಸುಮಾರು ಒಂದು ಗಂಟೆ ಸುರಿದ ಮಳೆಗೆ ಕಾಡಿನ ತುಂಬ ತಂಪು ತುಂಬಿತು. ಹೊಸಪೋಡು, ಎರಕನಗದ್ದೆ, ಪುರಾಣಿ ಪೋಡು ಸುತ್ತಮುತ್ತ ಹೆಚ್ಚಿನ ಮಳೆಯಾಗಿದೆ.
ಹಾಸನ ಜಿಲ್ಲೆ ರಾಮನಾಥಪುರ ಹೋಬಳಿಯ ಕೇರಳಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸಾಧಾರಣ ಮಳೆ ಸುರಿಯಿತು. ಸಂಜೆ ಕೇರಳಾಪುರದಲ್ಲಿ ಗುಡುಗು ಸಹಿತ ಮಳೆ ಬಿತ್ತು.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಕೆ.ಆರ್.ನಗರ, ಬೆಟ್ಟದಪುರ ಭಾಗದಲ್ಲಿ ಸಂಜೆ ಗುಡುಗುಸಹಿತ ಮಳೆಯಾಗಿದೆ.