<p><strong>ಬೆಂಗಳೂರು:</strong> ನಗರದಲ್ಲಿ ಮಂಗಳವಾರ ಧಾರಾಕಾರವಾಗಿ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಹಲವೆಡೆ ಉರುಳಿಬಿದ್ದಿದ್ದ ಮರಗಳು ಹಾಗೂ ವಿದ್ಯುತ್ ಕಂಬಗಳ ತೆರವು ಕಾರ್ಯಾಚರಣೆ ಬುಧವಾರವೂ ನಡೆಯಿತು.</p>.<p>ನಗರದ ಬಹುತೇಕ ಕಡೆಗಳಲ್ಲಿ ಮಳೆ ಸುರಿದು, ರಸ್ತೆಯಲ್ಲೆಲ್ಲ ನೀರು ಹರಿದಿತ್ತು. ಕಾಲುವೆ ಹಾಗೂ ಚರಂಡಿಯ ತ್ಯಾಜ್ಯವೆಲ್ಲವೂಆ ರಸ್ತೆಗಳಲ್ಲಿ ಬಿದ್ದಿದ್ದು ಬುಧವಾರ ಕಂಡುಬಂತು.</p>.<p>ಬನಶಂಕರಿ, ಜೆ.ಪಿ.ನಗರ, ಚಾಮರಾಜಪೇಟೆ, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ನಾಗಸಂದ್ರ, ಪೀಣ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಅಲ್ಲೆಲ್ಲ ತಡರಾತ್ರಿ ವಾಹನಗಳ ದಟ್ಟಣೆಯೂ ಉಂಟಾಗಿತ್ತು.</p>.<p>ಚೊಕ್ಕಸಂದ್ರ, ಬಸವೇಶ್ವರನಗರ, ರಾಜಾಜಿನಗರದ ಟಿವಿಎಸ್ ಲೇಔಟ್ನ ಸುರಾನ ಕಾಲೇಜು, ಸಂಜಯನಗರ,ಪೀಣ್ಯದ ಎನ್ಟಿಟಿಎಫ್ ವೃತ್ತ, ಬಸವನಗುಡಿ, ಆರ್ಎಂಸಿ ಆಸ್ಪತ್ರೆ, ಹಲಸೂರು ಹಾಗೂ ಬಾಗಲಗುಂಟೆ ಎಂಇಐ ಲೇಔಟ್ ಬಳಿ ಉರುಳಿಬಿದ್ದಿದ್ದ ಮರಗಳ ಅವಶೇಷಗಳನ್ನು ತೆರವು ಮಾಡಲು ಬಿಬಿಎಂಪಿ ಸಿಬ್ಬಂದಿ ಹರಸಾಹಸಪಟ್ಟರು.</p>.<p>ಬಸವನಗುಡಿ, ಚೊಕ್ಕಸಂದ್ರ, ಬಸವೇಶ್ವರ ವೃತ್ತ (ಚಾಲುಕ್ಯ ವೃತ್ತ), ಜಯನಗರ 2ನೇ ಹಂತ, ಆನಂದನಗರದಲ್ಲಿ ಉರುಳಿಬಿದ್ದಿದ್ದ ಮರಗಳ ತೆರವು ಕೆಲಸ ಬುಧವಾರವೂ ಚಾಲ್ತಿಯಲ್ಲಿತ್ತು.</p>.<p><strong>ವಿದ್ಯುತ್ ಕಂಬಗಳ ತೆರವು:</strong> ಮಳೆ ವೇಳೆ ಜೋರಾದ ಗಾಳಿ ಬೀಸಿದ್ದರಿಂದ ನಗರದ ಹಲವೆಡೆ ವಿದ್ಯುತ್ ಕಂಬಗಳು ಸಹ ನೆಲಕ್ಕುರುಳಿದ್ದವು. ಅದರಿಂದಾಗಿ ಆರ್.ಟಿ.ನಗರ, ಸುಬ್ರಹ್ಮಣ್ಯನಗರ, ಆನಂದನಗರ, ಸಂಜಯನಗರ ಸೇರಿದಂತೆ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.</p>.<p>ಅಲ್ಲೆಲ್ಲ ಬೆಸ್ಕಾಂ ಸಿಬ್ಬಂದಿ, ವಿದ್ಯುತ್ ಕಂಬಗಳನ್ನು ಬುಧವಾರ ರಾತ್ರಿವರೆಗೂ ತೆರವು ಮಾಡಿದರು. ಅಲ್ಲಿಯವರೆಗೂ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿತ್ತು.</p>.<p><strong>ಮಳೆ ಆರ್ಭಟ; ಮನೆ, ಬೈಕ್ಗಳು ಜಖಂ</strong></p>.<p><strong>(ನೆಲಮಂಗಲ ವರದಿ):</strong>ತಾಲ್ಲೂಕಿನಾದ್ಯಂತ ಮಂಗಳವಾರ ಸುರಿದ ಗಾಳಿ ಸಹಿತ ಮಳೆಗೆ 13 ಮನೆಗಳಿಗೆ ಹಾನಿಯಾಗಿದ್ದು, ಎರಡು ಮನೆಗಳುಸಂಪೂರ್ಣವಾಗಿ ಹಾಳಾಗಿವೆ. ಎರಡುಬೈಕ್ಗಳು ಜಖಂಗೊಂಡು, ಇಬ್ಬರು ಗಾಯಗೊಂಡಿದ್ದಾರೆ.</p>.<p>ಇಲ್ಲಿಗೆಸಮೀಪದ ಮಲ್ಲಾಪುರದಲ್ಲಿ ಐದು ಮರಗಳು ನೆಲಕ್ಕುರುಳಿವೆ. ಆಲದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣವಾಗಿ ಹಾಳಾಗಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಎಂಬುವರಿಗೆ ಸೇರಿದ ಮನೆಯ ಶೀಟು ಹಾರಿಹೋಗಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳಿಗೆ ಹಾನಿಯಾಗಿದೆ. ಗ್ರಾಮದ ಮತ್ತೊಂದು ಮನೆಯಲ್ಲಿದ್ದ ಒಬ್ಬರ ಕಾಲು ಮುರಿದಿದ್ದು, ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಮನೆ ಕಳೆದುಕೊಂಡಸೋಮಶೇಖರ್, ‘ಮನೆಗೆ ಸಂಪೂರ್ಣ ಹಾನಿಯಾಗಿದೆ. ರಜೆ ಕಳೆಯಲೆಂದು ಊರಿನಿಂದ ಬಂದಿದ್ದ ಸಂಬಂಧಿಯ ಮಗನ ಕಾಲು ಮುರಿದಿದ್ದು ಬೇಸರ ಉಂಟು ಮಾಡಿದೆ. ಮನೆಯಲ್ಲಿ ಒಟ್ಟು 10 ಜನ ಇದ್ದೆವು. ರಾತ್ರಿಯೆಲ್ಲ ನಿದ್ದೆ ಇಲ್ಲ. ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸರ್ಕಾರಿ ಶಾಲೆಯ ಕಾಂಪೌಂಡ್ ಮೇಲೆ ಮರದ ಕೊಂಬೆ ಬಿದ್ದಿದ್ದು, ಮುಂಭಾಗಕ್ಕೆ ಹಾನಿಯಾಗಿದೆ. ಶಾಲೆ ರಜೆ ಇದ್ದ ಕಾರಣ ದೊಡ್ಡ ಅವಘಡ ಸಂಭವಿಸುವುದು ತಪ್ಪಿದೆ’ ಎಂದು ಸ್ಥಳೀಯ ಮಾರಯ್ಯ ಹೇಳಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ರಾಜಶೇಖರ್, ‘ಹಾನಿಗೆ ಸಂಬಂಧಿಸಿದ ವರದಿಯನ್ನು ಜಿಲ್ಲಾಧಿಕಾರಿ ಅವರಿಗೆ ಕಳುಹಿಸಿ, ಶೀಘ್ರವಾಗಿ ಪರಿಹಾರ<br />ಒದಗಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ವಿದ್ಯುತ್ ಸಂಪರ್ಕ ಕಡಿತ: ಇಲ್ಲಿಗೆ ಸಮೀಪದ ದಾಸನಪುರದಲ್ಲಿ ಮಂಗಳವಾರ ಸಂಜೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನ ಪರದಾಡುತ್ತಿದ್ದಾರೆ.</p>.<p><strong>**</strong></p>.<p><strong>65:</strong>ಉರುಳಿಬಿದ್ದ ಮರಗಳು<br /><strong>80:</strong>ನೆಲಕ್ಕುರುಳಿದ ವಿದ್ಯುತ್ ಕಂಬಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಮಂಗಳವಾರ ಧಾರಾಕಾರವಾಗಿ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಹಲವೆಡೆ ಉರುಳಿಬಿದ್ದಿದ್ದ ಮರಗಳು ಹಾಗೂ ವಿದ್ಯುತ್ ಕಂಬಗಳ ತೆರವು ಕಾರ್ಯಾಚರಣೆ ಬುಧವಾರವೂ ನಡೆಯಿತು.</p>.<p>ನಗರದ ಬಹುತೇಕ ಕಡೆಗಳಲ್ಲಿ ಮಳೆ ಸುರಿದು, ರಸ್ತೆಯಲ್ಲೆಲ್ಲ ನೀರು ಹರಿದಿತ್ತು. ಕಾಲುವೆ ಹಾಗೂ ಚರಂಡಿಯ ತ್ಯಾಜ್ಯವೆಲ್ಲವೂಆ ರಸ್ತೆಗಳಲ್ಲಿ ಬಿದ್ದಿದ್ದು ಬುಧವಾರ ಕಂಡುಬಂತು.</p>.<p>ಬನಶಂಕರಿ, ಜೆ.ಪಿ.ನಗರ, ಚಾಮರಾಜಪೇಟೆ, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ನಾಗಸಂದ್ರ, ಪೀಣ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಅಲ್ಲೆಲ್ಲ ತಡರಾತ್ರಿ ವಾಹನಗಳ ದಟ್ಟಣೆಯೂ ಉಂಟಾಗಿತ್ತು.</p>.<p>ಚೊಕ್ಕಸಂದ್ರ, ಬಸವೇಶ್ವರನಗರ, ರಾಜಾಜಿನಗರದ ಟಿವಿಎಸ್ ಲೇಔಟ್ನ ಸುರಾನ ಕಾಲೇಜು, ಸಂಜಯನಗರ,ಪೀಣ್ಯದ ಎನ್ಟಿಟಿಎಫ್ ವೃತ್ತ, ಬಸವನಗುಡಿ, ಆರ್ಎಂಸಿ ಆಸ್ಪತ್ರೆ, ಹಲಸೂರು ಹಾಗೂ ಬಾಗಲಗುಂಟೆ ಎಂಇಐ ಲೇಔಟ್ ಬಳಿ ಉರುಳಿಬಿದ್ದಿದ್ದ ಮರಗಳ ಅವಶೇಷಗಳನ್ನು ತೆರವು ಮಾಡಲು ಬಿಬಿಎಂಪಿ ಸಿಬ್ಬಂದಿ ಹರಸಾಹಸಪಟ್ಟರು.</p>.<p>ಬಸವನಗುಡಿ, ಚೊಕ್ಕಸಂದ್ರ, ಬಸವೇಶ್ವರ ವೃತ್ತ (ಚಾಲುಕ್ಯ ವೃತ್ತ), ಜಯನಗರ 2ನೇ ಹಂತ, ಆನಂದನಗರದಲ್ಲಿ ಉರುಳಿಬಿದ್ದಿದ್ದ ಮರಗಳ ತೆರವು ಕೆಲಸ ಬುಧವಾರವೂ ಚಾಲ್ತಿಯಲ್ಲಿತ್ತು.</p>.<p><strong>ವಿದ್ಯುತ್ ಕಂಬಗಳ ತೆರವು:</strong> ಮಳೆ ವೇಳೆ ಜೋರಾದ ಗಾಳಿ ಬೀಸಿದ್ದರಿಂದ ನಗರದ ಹಲವೆಡೆ ವಿದ್ಯುತ್ ಕಂಬಗಳು ಸಹ ನೆಲಕ್ಕುರುಳಿದ್ದವು. ಅದರಿಂದಾಗಿ ಆರ್.ಟಿ.ನಗರ, ಸುಬ್ರಹ್ಮಣ್ಯನಗರ, ಆನಂದನಗರ, ಸಂಜಯನಗರ ಸೇರಿದಂತೆ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.</p>.<p>ಅಲ್ಲೆಲ್ಲ ಬೆಸ್ಕಾಂ ಸಿಬ್ಬಂದಿ, ವಿದ್ಯುತ್ ಕಂಬಗಳನ್ನು ಬುಧವಾರ ರಾತ್ರಿವರೆಗೂ ತೆರವು ಮಾಡಿದರು. ಅಲ್ಲಿಯವರೆಗೂ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿತ್ತು.</p>.<p><strong>ಮಳೆ ಆರ್ಭಟ; ಮನೆ, ಬೈಕ್ಗಳು ಜಖಂ</strong></p>.<p><strong>(ನೆಲಮಂಗಲ ವರದಿ):</strong>ತಾಲ್ಲೂಕಿನಾದ್ಯಂತ ಮಂಗಳವಾರ ಸುರಿದ ಗಾಳಿ ಸಹಿತ ಮಳೆಗೆ 13 ಮನೆಗಳಿಗೆ ಹಾನಿಯಾಗಿದ್ದು, ಎರಡು ಮನೆಗಳುಸಂಪೂರ್ಣವಾಗಿ ಹಾಳಾಗಿವೆ. ಎರಡುಬೈಕ್ಗಳು ಜಖಂಗೊಂಡು, ಇಬ್ಬರು ಗಾಯಗೊಂಡಿದ್ದಾರೆ.</p>.<p>ಇಲ್ಲಿಗೆಸಮೀಪದ ಮಲ್ಲಾಪುರದಲ್ಲಿ ಐದು ಮರಗಳು ನೆಲಕ್ಕುರುಳಿವೆ. ಆಲದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣವಾಗಿ ಹಾಳಾಗಿದೆ.</p>.<p>ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಎಂಬುವರಿಗೆ ಸೇರಿದ ಮನೆಯ ಶೀಟು ಹಾರಿಹೋಗಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳಿಗೆ ಹಾನಿಯಾಗಿದೆ. ಗ್ರಾಮದ ಮತ್ತೊಂದು ಮನೆಯಲ್ಲಿದ್ದ ಒಬ್ಬರ ಕಾಲು ಮುರಿದಿದ್ದು, ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಮನೆ ಕಳೆದುಕೊಂಡಸೋಮಶೇಖರ್, ‘ಮನೆಗೆ ಸಂಪೂರ್ಣ ಹಾನಿಯಾಗಿದೆ. ರಜೆ ಕಳೆಯಲೆಂದು ಊರಿನಿಂದ ಬಂದಿದ್ದ ಸಂಬಂಧಿಯ ಮಗನ ಕಾಲು ಮುರಿದಿದ್ದು ಬೇಸರ ಉಂಟು ಮಾಡಿದೆ. ಮನೆಯಲ್ಲಿ ಒಟ್ಟು 10 ಜನ ಇದ್ದೆವು. ರಾತ್ರಿಯೆಲ್ಲ ನಿದ್ದೆ ಇಲ್ಲ. ಸರ್ಕಾರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>‘ಸರ್ಕಾರಿ ಶಾಲೆಯ ಕಾಂಪೌಂಡ್ ಮೇಲೆ ಮರದ ಕೊಂಬೆ ಬಿದ್ದಿದ್ದು, ಮುಂಭಾಗಕ್ಕೆ ಹಾನಿಯಾಗಿದೆ. ಶಾಲೆ ರಜೆ ಇದ್ದ ಕಾರಣ ದೊಡ್ಡ ಅವಘಡ ಸಂಭವಿಸುವುದು ತಪ್ಪಿದೆ’ ಎಂದು ಸ್ಥಳೀಯ ಮಾರಯ್ಯ ಹೇಳಿದರು.</p>.<p>ಸ್ಥಳಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ರಾಜಶೇಖರ್, ‘ಹಾನಿಗೆ ಸಂಬಂಧಿಸಿದ ವರದಿಯನ್ನು ಜಿಲ್ಲಾಧಿಕಾರಿ ಅವರಿಗೆ ಕಳುಹಿಸಿ, ಶೀಘ್ರವಾಗಿ ಪರಿಹಾರ<br />ಒದಗಿಸಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ವಿದ್ಯುತ್ ಸಂಪರ್ಕ ಕಡಿತ: ಇಲ್ಲಿಗೆ ಸಮೀಪದ ದಾಸನಪುರದಲ್ಲಿ ಮಂಗಳವಾರ ಸಂಜೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನ ಪರದಾಡುತ್ತಿದ್ದಾರೆ.</p>.<p><strong>**</strong></p>.<p><strong>65:</strong>ಉರುಳಿಬಿದ್ದ ಮರಗಳು<br /><strong>80:</strong>ನೆಲಕ್ಕುರುಳಿದ ವಿದ್ಯುತ್ ಕಂಬಗಳು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>