<p><strong>ಬೆಂಗಳೂರು:</strong> ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಸಾಧಾರಣ ಮಳೆ ಸುರಿದಿದ್ದು, ವಾತಾವರಣ ಸ್ವಲ್ಪ ತಂಪಾಗಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸೆಖೆಯ ಪ್ರಮಾಣ ಹೆಚ್ಚಿತ್ತು. ಸಂಜೆ 4 ಗಂಟೆಯ ಸುಮಾರಿಗೆ ಸಾಧಾರಣ ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ, ತಲಪಾಡಿ ಮತ್ತು ಚಿಕ್ಕಮಗಳೂರು ಜಿಲ್ಲೆ, ಮೂಡುಬಿದಿರೆ ಸುತ್ತಮುತ್ತ ಉತ್ತಮ ಮಳೆಯಾಗಿದೆ.</p>.<p>ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ 2-3 ದಿನ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಬಾಳೆಹೊನ್ನೂರು ಸುತ್ತ ತುಂತುರು ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.</p>.<p>ಸುಂಟಿಕೊಪ್ಪ, ಚಟ್ಟಳ್ಳಿ, ಸಿದ್ದಾಪುರ, ನಾಕೂರು, ಮಳೂರು, ಬಾಳೆಕಾಡು, ಕೊಡಗರಹಳ್ಳಿ ವ್ಯಾಪ್ತಿಯಲ್ಲಿ ಒಂದು ಗಂಟೆ ರಭಸವಾಗಿ ಸುರಿದು ತಂಪೆರೆಯಿತು. ಮಡಿಕೇರಿ ಸುತ್ತಮುತ್ತ, ಕುಶಾಲನಗರ, ನಾಪೋಕ್ಲು, ತಲಕಾವೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ, ಹುಣಸೂರು ತಾಲ್ಲೂಕಿನ ಬಿಳಿಕೆರೆ ಹಾಗೂ ಮೈಸೂರಿನ ಹೊರವಲಯದಲ್ಲಿ ಸಾಧಾರಣ ಮಳೆ ಸುರಿದಿದೆ.</p>.<p>ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣ ಸೇರಿ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.</p>.<p>ಶಿವಮೊಗ್ಗ ನಗರದಲ್ಲಿ ಮಂಗಳವಾರ ಸಂಜೆ ಕೆಲವು ನಿಮಿಷ ಸುರಿದ ಮಳೆ ಕಾವಲಿಯಂತಾಗಿದ್ದ ಭೂಮಿಗೆ ತಂಪೆರೆಯಿತು. ತೀರ್ಥಹಳ್ಳಿ ಸುತ್ತಮುತ್ತ ಸಂಜೆಯವರೆಗೂ ಮೋಡ ಕವಿದ ವಾತಾವರಣವಿತ್ತು.</p>.<p><strong>ತಂಪಾದ ರಾಜಧಾನಿ</strong></p>.<p>ಬಿಸಿಲಿನಿಂದ ಬಳಲಿದ್ದ ಬೆಂಗಳೂರುನಗರದ ಜನತೆಗೆ ಮಂಗಳವಾರ ಸಂಜೆ ಬಿದ್ದ ಮಳೆ ತಂಪೆರೆದಿದೆ.</p>.<p>ಧಾರಾಕಾರ ಮಳೆಯ ಜತೆಗೆ ಗಾಳಿಯ ವೇಗವೂ ಜೋರಾಗಿದ್ದರಿಂದ ನಗರದ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿಬಿದ್ದಿವೆ.</p>.<p>ನಗರದಲ್ಲಿ ಮಧ್ಯಾಹ್ನವೇ ಮೋಡ ಕವಿದ ವಾತಾವರಣ ಮಳೆಯ ಮುನ್ಸೂಚನೆ ನೀಡಿತ್ತು. ಸಿಡಿಲು, ಗುಡುಗು ಸಹಿತ ಸಂಜೆಯ ವೇಳೆಗೆ ಜಿಟಿ ಜಿಟಿಯಾಗಿ ಮಳೆ ಶುರುವಾಯಿತು. ಕ್ರಮೇಣ ಮಳೆಯ ಆರ್ಭಟ ಹೆಚ್ಚಾಯಿತು.</p>.<p>ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಪೀಣ್ಯ, ದಾಸರಹಳ್ಳಿ, ನಾಗಸಂದ್ರ, ವಿದ್ಯಾರಣ್ಯಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಯಿತು. ಅಲ್ಲೆಲ್ಲ ಕಾಲುವೆಗಳು ತುಂಬಿ ರಸ್ತೆಯಲ್ಲೇ ನೀರು ಹರಿಯಿತು.</p>.<p>‘ಬೆಂಗಳೂರು ವಾಯುವ್ಯ ಭಾಗದ ಪ್ರದೇಶಗಳಲ್ಲಿ ಜೋರಾಗಿ ಮಳೆ ಆಗಿದೆ. ಉಳಿದೆಡೆ ಜಿಟಿ ಜಿಟಿ ಮಳೆ ಸುರಿದಿದೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<p><strong>ರಾಮನಗರದಲ್ಲೂ ಮಳೆಯ ಅಬ್ಬರ</strong></p>.<p><strong>ರಾಮನಗರ:</strong> ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ವರುಣ ಅರ್ಭರಿಸಿದ್ದು, ಗುಡುಗು ಸಹಿತ ಜೋರು ಮಳೆಯಾಗಿದೆ.ರಾತ್ರಿ ಎಂಟರ ಸುಮಾರಿಗೆ ತಾಲ್ಲೂಕಿನ ಕೆಲವೆಡೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿದೆ. ಇನ್ನೂ ಕೆಲವಡೆ ಜೋರು ಗಾಳಿ ಬೀಸಿದ್ದು, ಗುಡುಗು ಸಿಡಿಲಿನ ಅಬ್ಬರವಷ್ಟೇ ಕೇಳಿಸಿತು.</p>.<p>ರಾಮನಗರ ತಾಲ್ಲೂಕಿನ ಬನ್ನಿಕುಪ್ಪೆಯಲ್ಲಿ67 ಮಿ.ಮೀ, ಗೋಪನಹಳ್ಳಿಯಲ್ಲಿ71 ಮಿ.ಮೀ ಮಳೆ ಪ್ರಮಾಣ ದಾಖಲಾಗಿದೆ. ಕನಕಪುರ ತಾಲ್ಲೂಕಿನ ಅಲ್ಲಲ್ಲೂ ಜೋರು ಮಳೆಯಾಗಿದೆ. ತಾಲ್ಲೂಕಿನ ಚೀಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 71 ಮಿ.ಮೀ, ಕೊಳಕೊಂಡನಹಳ್ಳಿಯಲ್ಲಿ 93 ಮಿ.ಮೀ.ನಷ್ಟು ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಸಾಧಾರಣ ಮಳೆ ಸುರಿದಿದ್ದು, ವಾತಾವರಣ ಸ್ವಲ್ಪ ತಂಪಾಗಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸೆಖೆಯ ಪ್ರಮಾಣ ಹೆಚ್ಚಿತ್ತು. ಸಂಜೆ 4 ಗಂಟೆಯ ಸುಮಾರಿಗೆ ಸಾಧಾರಣ ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ, ತಲಪಾಡಿ ಮತ್ತು ಚಿಕ್ಕಮಗಳೂರು ಜಿಲ್ಲೆ, ಮೂಡುಬಿದಿರೆ ಸುತ್ತಮುತ್ತ ಉತ್ತಮ ಮಳೆಯಾಗಿದೆ.</p>.<p>ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ 2-3 ದಿನ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಬಾಳೆಹೊನ್ನೂರು ಸುತ್ತ ತುಂತುರು ಮಳೆಯಾಗಿದೆ.</p>.<p>ಕೊಡಗು ಜಿಲ್ಲೆಯ ವಿವಿಧೆಡೆ ಮಂಗಳವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.</p>.<p>ಸುಂಟಿಕೊಪ್ಪ, ಚಟ್ಟಳ್ಳಿ, ಸಿದ್ದಾಪುರ, ನಾಕೂರು, ಮಳೂರು, ಬಾಳೆಕಾಡು, ಕೊಡಗರಹಳ್ಳಿ ವ್ಯಾಪ್ತಿಯಲ್ಲಿ ಒಂದು ಗಂಟೆ ರಭಸವಾಗಿ ಸುರಿದು ತಂಪೆರೆಯಿತು. ಮಡಿಕೇರಿ ಸುತ್ತಮುತ್ತ, ಕುಶಾಲನಗರ, ನಾಪೋಕ್ಲು, ತಲಕಾವೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.</p>.<p>ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ, ಹುಣಸೂರು ತಾಲ್ಲೂಕಿನ ಬಿಳಿಕೆರೆ ಹಾಗೂ ಮೈಸೂರಿನ ಹೊರವಲಯದಲ್ಲಿ ಸಾಧಾರಣ ಮಳೆ ಸುರಿದಿದೆ.</p>.<p>ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣ ಸೇರಿ ತಾಲ್ಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.</p>.<p>ಶಿವಮೊಗ್ಗ ನಗರದಲ್ಲಿ ಮಂಗಳವಾರ ಸಂಜೆ ಕೆಲವು ನಿಮಿಷ ಸುರಿದ ಮಳೆ ಕಾವಲಿಯಂತಾಗಿದ್ದ ಭೂಮಿಗೆ ತಂಪೆರೆಯಿತು. ತೀರ್ಥಹಳ್ಳಿ ಸುತ್ತಮುತ್ತ ಸಂಜೆಯವರೆಗೂ ಮೋಡ ಕವಿದ ವಾತಾವರಣವಿತ್ತು.</p>.<p><strong>ತಂಪಾದ ರಾಜಧಾನಿ</strong></p>.<p>ಬಿಸಿಲಿನಿಂದ ಬಳಲಿದ್ದ ಬೆಂಗಳೂರುನಗರದ ಜನತೆಗೆ ಮಂಗಳವಾರ ಸಂಜೆ ಬಿದ್ದ ಮಳೆ ತಂಪೆರೆದಿದೆ.</p>.<p>ಧಾರಾಕಾರ ಮಳೆಯ ಜತೆಗೆ ಗಾಳಿಯ ವೇಗವೂ ಜೋರಾಗಿದ್ದರಿಂದ ನಗರದ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಮರಗಳು ಉರುಳಿಬಿದ್ದಿವೆ.</p>.<p>ನಗರದಲ್ಲಿ ಮಧ್ಯಾಹ್ನವೇ ಮೋಡ ಕವಿದ ವಾತಾವರಣ ಮಳೆಯ ಮುನ್ಸೂಚನೆ ನೀಡಿತ್ತು. ಸಿಡಿಲು, ಗುಡುಗು ಸಹಿತ ಸಂಜೆಯ ವೇಳೆಗೆ ಜಿಟಿ ಜಿಟಿಯಾಗಿ ಮಳೆ ಶುರುವಾಯಿತು. ಕ್ರಮೇಣ ಮಳೆಯ ಆರ್ಭಟ ಹೆಚ್ಚಾಯಿತು.</p>.<p>ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ಪೀಣ್ಯ, ದಾಸರಹಳ್ಳಿ, ನಾಗಸಂದ್ರ, ವಿದ್ಯಾರಣ್ಯಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಯಿತು. ಅಲ್ಲೆಲ್ಲ ಕಾಲುವೆಗಳು ತುಂಬಿ ರಸ್ತೆಯಲ್ಲೇ ನೀರು ಹರಿಯಿತು.</p>.<p>‘ಬೆಂಗಳೂರು ವಾಯುವ್ಯ ಭಾಗದ ಪ್ರದೇಶಗಳಲ್ಲಿ ಜೋರಾಗಿ ಮಳೆ ಆಗಿದೆ. ಉಳಿದೆಡೆ ಜಿಟಿ ಜಿಟಿ ಮಳೆ ಸುರಿದಿದೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<p><strong>ರಾಮನಗರದಲ್ಲೂ ಮಳೆಯ ಅಬ್ಬರ</strong></p>.<p><strong>ರಾಮನಗರ:</strong> ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ವರುಣ ಅರ್ಭರಿಸಿದ್ದು, ಗುಡುಗು ಸಹಿತ ಜೋರು ಮಳೆಯಾಗಿದೆ.ರಾತ್ರಿ ಎಂಟರ ಸುಮಾರಿಗೆ ತಾಲ್ಲೂಕಿನ ಕೆಲವೆಡೆ ಗುಡುಗು ಸಿಡಿಲು ಸಹಿತ ಮಳೆ ಸುರಿದಿದೆ. ಇನ್ನೂ ಕೆಲವಡೆ ಜೋರು ಗಾಳಿ ಬೀಸಿದ್ದು, ಗುಡುಗು ಸಿಡಿಲಿನ ಅಬ್ಬರವಷ್ಟೇ ಕೇಳಿಸಿತು.</p>.<p>ರಾಮನಗರ ತಾಲ್ಲೂಕಿನ ಬನ್ನಿಕುಪ್ಪೆಯಲ್ಲಿ67 ಮಿ.ಮೀ, ಗೋಪನಹಳ್ಳಿಯಲ್ಲಿ71 ಮಿ.ಮೀ ಮಳೆ ಪ್ರಮಾಣ ದಾಖಲಾಗಿದೆ. ಕನಕಪುರ ತಾಲ್ಲೂಕಿನ ಅಲ್ಲಲ್ಲೂ ಜೋರು ಮಳೆಯಾಗಿದೆ. ತಾಲ್ಲೂಕಿನ ಚೀಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ 71 ಮಿ.ಮೀ, ಕೊಳಕೊಂಡನಹಳ್ಳಿಯಲ್ಲಿ 93 ಮಿ.ಮೀ.ನಷ್ಟು ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>