ಯಾರೊಬ್ಬರೂ ಬಹಿರಂಗವಾಗಿ ಮಾಧ್ಯಮಗಳಲ್ಲಿ ಟೀಕೆ ಟಿಪ್ಪಣಿ ಮಾಡುವುದಾಗಲಿ, ಪಕ್ಷದ ಘನತೆ ಗೌರವಗಳಿಗೆ ಕುಂದುಂಟಾಗುವಂತೆ ನಡೆದುಕೊಳ್ಳಬಾರದು. ಈ ಹಿಂದೆ ಅನೇಕ ಬಾರಿ ನಿಮಗೆ ಎಚ್ಚರಿಸಿದ್ದರೂ ನೀವು ತಪ್ಪನ್ನು ತಿದ್ದಿಕೊಂಡಿಲ್ಲ. ಮೂರು ದಿನಗಳಲ್ಲಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಲಾಗಿದೆ.