‘ಬೆಳಗಾವಿ ಹಾಗೂ ಬಳ್ಳಾರಿ ಜಿಲ್ಲಾ ರಾಜಕಾರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಎತ್ತಿ ಕಟ್ಟುತ್ತಿದ್ದಾರೆ’ ಎಂದು ಜಾರಕಿಹೊಳಿ ಸಹೋದರರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಬಳಿಕ ನಡೆದ ಯಾವುದೇ ಸಂಪುಟ ಸಭೆಗೆ ರಮೇಶ ಅವರು ಹಾಜರಾಗಿರಲಿಲ್ಲ. ‘ದೇವರಲ್ಲಿ ಯಾವುದೋ ವಿಷಯದ ಬಗ್ಗೆ ಕೇಳಿಕೊಂಡಿದ್ದೇನೆ. ಅದು ಈಡೇರಿದ ಬಳಿಕ ಸಭೆಗೆ ಹೋಗುತ್ತೇನೆ’ ಎಂದು ಪ್ರತಿಕ್ರಿಯಿಸಿದ್ದರು.