<p><strong>ಬೆಂಗಳೂರು:</strong> ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗ ಜಂಟಿಯಾಗಿ ನಗರದಲ್ಲಿ ಹಮ್ಮಿಕೊಂಡಿರುವ ‘ಸೈಬರ್ ಏಜ್’ ವಿಚಾರ ಸಂಕಿರಣಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡಾ. ಶ್ಯಾಮಲಾ ಎಸ್. ಕುಂದರ್ ಮಾತನಾಡಿ, ‘ಸೈಬರ್ ಅಪರಾಧ ಸಂಬಂಧ ವರ್ಷಕ್ಕೆ 20 ಸಾವಿರದಿಂದ 30 ಸಾವಿರ ದೂರುಗಳು ಆಯೋಗಕ್ಕೆ ಬರುತ್ತವೆ ಮಹಿಳೆಯರು ಸೈಬರ್ ಅಪರಾಧಗಳಿಂದ ಎಷ್ಟು ನೊಂದುಕೊಳ್ಳುತ್ತಿದ್ದಾರೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ’ ಎಂದರು.</p>.<p>‘ಸೈಬರ್ ಲಾ ಪೋರ್ಟಲ್’ ಸಂಸ್ಥಾ ಪಕಎನ್.ವಿಜಯಶಂಕರ್ ಮಾತನಾಡಿ, ‘ಸೈಬರ್ ಜಾಗವನ್ನು ತಂತ್ರಜ್ಞರು ಸೃಷ್ಟಿಸುತ್ತಿದ್ದಾರೆ. ಅಲ್ಲಿ ಸಂಭವಿಸುವ ಅಪರಾಧಗಳನ್ನು ತಡೆಯಲು ತಂತ್ರಜ್ಞರ ರೀತಿಯಲ್ಲೇ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದರು.</p>.<p>‘ಸೈಬರ್ ಕ್ಷೇತ್ರದಲ್ಲಿ ಮಹಿಳೆಯರ ಖಾಸಗಿತನ ಹಾಗೂ ರಕ್ಷಣೆಗೆ ಧಕ್ಕೆ ಯಾಗದಂತೆ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶೈಕ್ಷಣಿಕ ರಿಜಿಸ್ಟ್ರಾರ್ಡಾ. ಅರ್ಚನಾ, ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮುಖ್ಯಸ್ಥ ಡಾ. ಪಿ.ವಿ.ರವೀಂದ್ರ,ಸಹಾಯಕ ಪ್ರಾಧ್ಯಾಪಕ ಜಿ.ವಿಜಯಕುಮಾರ್ ಸಂಕಿರಣದಲ್ಲಿ ಪಾಲ್ಗೊಂಡಿದ್ದರು.</p>.<p>‘ಮಹಿಳೆಯರ ಮೇಲೆ ನಡೆಯುವ ಸೈಬರ್ ಅಪರಾಧಗಳು ಹಾಗೂ ಅವರ ರಕ್ಷಣೆಗೆ ಕಾನೂನಿನಲ್ಲಿರುವ ಕ್ರಮಗಳು’ ವಿಷಯದಡಿ 22 ಹಾಗೂ 23ರಂದು ಈ ವಿಚಾರಣ ಸಂಕಿರಣ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗ ಜಂಟಿಯಾಗಿ ನಗರದಲ್ಲಿ ಹಮ್ಮಿಕೊಂಡಿರುವ ‘ಸೈಬರ್ ಏಜ್’ ವಿಚಾರ ಸಂಕಿರಣಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.</p>.<p>ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡಾ. ಶ್ಯಾಮಲಾ ಎಸ್. ಕುಂದರ್ ಮಾತನಾಡಿ, ‘ಸೈಬರ್ ಅಪರಾಧ ಸಂಬಂಧ ವರ್ಷಕ್ಕೆ 20 ಸಾವಿರದಿಂದ 30 ಸಾವಿರ ದೂರುಗಳು ಆಯೋಗಕ್ಕೆ ಬರುತ್ತವೆ ಮಹಿಳೆಯರು ಸೈಬರ್ ಅಪರಾಧಗಳಿಂದ ಎಷ್ಟು ನೊಂದುಕೊಳ್ಳುತ್ತಿದ್ದಾರೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ’ ಎಂದರು.</p>.<p>‘ಸೈಬರ್ ಲಾ ಪೋರ್ಟಲ್’ ಸಂಸ್ಥಾ ಪಕಎನ್.ವಿಜಯಶಂಕರ್ ಮಾತನಾಡಿ, ‘ಸೈಬರ್ ಜಾಗವನ್ನು ತಂತ್ರಜ್ಞರು ಸೃಷ್ಟಿಸುತ್ತಿದ್ದಾರೆ. ಅಲ್ಲಿ ಸಂಭವಿಸುವ ಅಪರಾಧಗಳನ್ನು ತಡೆಯಲು ತಂತ್ರಜ್ಞರ ರೀತಿಯಲ್ಲೇ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದರು.</p>.<p>‘ಸೈಬರ್ ಕ್ಷೇತ್ರದಲ್ಲಿ ಮಹಿಳೆಯರ ಖಾಸಗಿತನ ಹಾಗೂ ರಕ್ಷಣೆಗೆ ಧಕ್ಕೆ ಯಾಗದಂತೆ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ’ ಎಂದು ಹೇಳಿದರು.</p>.<p>ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶೈಕ್ಷಣಿಕ ರಿಜಿಸ್ಟ್ರಾರ್ಡಾ. ಅರ್ಚನಾ, ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮುಖ್ಯಸ್ಥ ಡಾ. ಪಿ.ವಿ.ರವೀಂದ್ರ,ಸಹಾಯಕ ಪ್ರಾಧ್ಯಾಪಕ ಜಿ.ವಿಜಯಕುಮಾರ್ ಸಂಕಿರಣದಲ್ಲಿ ಪಾಲ್ಗೊಂಡಿದ್ದರು.</p>.<p>‘ಮಹಿಳೆಯರ ಮೇಲೆ ನಡೆಯುವ ಸೈಬರ್ ಅಪರಾಧಗಳು ಹಾಗೂ ಅವರ ರಕ್ಷಣೆಗೆ ಕಾನೂನಿನಲ್ಲಿರುವ ಕ್ರಮಗಳು’ ವಿಷಯದಡಿ 22 ಹಾಗೂ 23ರಂದು ಈ ವಿಚಾರಣ ಸಂಕಿರಣ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>