ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಂಗಮಂದಿರ ಕೊರತೆಯಿಂದಾಗಿ ರಂಗ ಚಟುವಟಿಕೆಗಳು ಕುಂಠಿತವಾಗಿವೆ. ಈ ಕಾರಣದಿಂದಾಗಿ ರಂಗಮಂದಿರ ಪ್ರಾಧಿಕಾರ ರಚಿಸಬೇಕು ಎಂಬ ಬೇಡಿಕೆ ಜೀವತಳೆದಿತ್ತು. ನಾಡಿನ ರಂಗ
ಕರ್ಮಿಗಳು ಹಾಗೂ ಸಾಂಸ್ಕೃತಿಕ ವಲಯದ ತಜ್ಞರ ಸಲಹೆ ಅನುಸಾರನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಂಗಮಂದಿರ ಪ್ರಾಧಿಕಾರಕ್ಕೆ ಅಂತಿಮ ಸ್ವರೂಪ ನೀಡಲಾಗಿದೆ. ‘ಕರ್ನಾಟಕ ರಂಗಮಂದಿರಗಳ ಪ್ರಾಧಿಕಾರ’ ಎಂಬ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಪ್ರಾಧಿಕಾರದ ಪ್ರಧಾನ ಕಚೇರಿಯನ್ನು ಧಾರವಾಡ ಅಥವಾ ದಾವಣಗೆರೆಯಲ್ಲಿ ನಿರ್ಮಿಸಬೇಕೆಂದು ನಿರ್ಧರಿಸಲಾಗಿದೆ. ಈ ಕರಡು ಪ್ರಸ್ತಾವನೆಯನ್ನು ಲೋಕಸಭೆ ಚುನಾವಣೆ ಬಳಿಕ ನಾಟಕ ಅಕಾಡೆಮಿಯು ಸರ್ಕಾರಕ್ಕೆ ಸಲ್ಲಿಸಲಿದೆ.