<p><strong>ಬೆಂಗಳೂರು:</strong> ರಂಗಮಂದಿರಗಳ ಕೊರತೆ ಹಾಗೂ ರಂಗಭೂಮಿಯ ಸಮಸ್ಯೆಗಳನ್ನು ನೀಗಿಸುವ ‘ರಂಗ ಮಂದಿರ ಪ್ರಾಧಿಕಾರ’ ರಚನೆಗೆ ಅಂತಿಮ ರೂಪುರೇಷೆಯನ್ನು ಕರ್ನಾಟಕ ನಾಟಕ ಅಕಾಡೆಮಿ ಸಿದ್ಧಪಡಿಸಿದೆ.</p>.<p>ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಂಗಮಂದಿರ ಕೊರತೆಯಿಂದಾಗಿ ರಂಗ ಚಟುವಟಿಕೆಗಳು ಕುಂಠಿತವಾಗಿವೆ. ಈ ಕಾರಣದಿಂದಾಗಿ ರಂಗಮಂದಿರ ಪ್ರಾಧಿಕಾರ ರಚಿಸಬೇಕು ಎಂಬ ಬೇಡಿಕೆ ಜೀವತಳೆದಿತ್ತು. ನಾಡಿನ ರಂಗ<br />ಕರ್ಮಿಗಳು ಹಾಗೂ ಸಾಂಸ್ಕೃತಿಕ ವಲಯದ ತಜ್ಞರ ಸಲಹೆ ಅನುಸಾರನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಂಗಮಂದಿರ ಪ್ರಾಧಿಕಾರಕ್ಕೆ ಅಂತಿಮ ಸ್ವರೂಪ ನೀಡಲಾಗಿದೆ. ‘ಕರ್ನಾಟಕ ರಂಗಮಂದಿರಗಳ ಪ್ರಾಧಿಕಾರ’ ಎಂಬ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಪ್ರಾಧಿಕಾರದ ಪ್ರಧಾನ ಕಚೇರಿಯನ್ನು ಧಾರವಾಡ ಅಥವಾ ದಾವಣಗೆರೆಯಲ್ಲಿ ನಿರ್ಮಿಸಬೇಕೆಂದು ನಿರ್ಧರಿಸಲಾಗಿದೆ. ಈ ಕರಡು ಪ್ರಸ್ತಾವನೆಯನ್ನು ಲೋಕಸಭೆ ಚುನಾವಣೆ ಬಳಿಕ ನಾಟಕ ಅಕಾಡೆಮಿಯು ಸರ್ಕಾರಕ್ಕೆ ಸಲ್ಲಿಸಲಿದೆ.</p>.<p class="Subhead">300ಆಸನಗಳ ರಂಗಮಂದಿರ: ಪ್ರತಿ ತಾಲ್ಲೂಕಿನಲ್ಲಿ 300 ಆಸನದ ಸುಸಜ್ಜಿತ ರಂಗಮಂದಿರ ನಿರ್ಮಾಣ ಮಾಡಬೇಕು ಎಂದು ಶಿಫಾರಸು ಮಾಡಿದೆ.</p>.<p>ಇದರ ಅನುಸಾರ ವೃತ್ತಿ, ಪೌರಾಣಿಕ ಹಾಗೂ ಹವ್ಯಾಸಿ ನಾಟಕಗಳ ಪ್ರದರ್ಶನಕ್ಕೆ ಆದ್ಯತೆ ನೀಡಬೇಕು ಎಂದು ಹೇಳಲಾಗಿದೆ. ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಡಳಿತ ಅನುಭವ ಹಾಗೂ ರಂಗ ಪರಿಣತಿ ಹೊಂದಿರುವವರನ್ನು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಸೂಚಿಸಲಾಗಿದೆ.</p>.<p>ರಾಜ್ಯದ ನಾಲ್ಕೂ ಕಂದಾಯ ವಿಭಾಗದಿಂದ ತಲಾ ಇಬ್ಬರಂತೆ ರಂಗಭೂಮಿಗೆ ಸಂಬಂಧಿಸಿದ 8 ಜನ ಸದಸ್ಯರ ಜತೆಗೆ ಒಟ್ಟು 15 ಸದಸ್ಯರು ಪ್ರಾಧಿಕಾರದಲ್ಲಿ ಇರಬೇಕು. ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರವಧಿ 5 ವರ್ಷ ಇರಬೇಕೆಂದು ಅಂಗರಚನೆಯಲ್ಲಿ ತಿಳಿಸಲಾಗಿದೆ.</p>.<p>***<br />ರಂಗಭೂಮಿ ಪ್ರಾಧಿಕಾರ ರಚನೆ ವಿಚಾರವಾಗಿ ರಂಗಕರ್ಮಿಗಳ ಸಲಹೆ ಅನುಸಾರ ಕರಡು ಅಂಗರಚನೆ ಸಿದ್ಧಗೊಳಿಸಲಾಗಿದೆ. ಇದಕ್ಕೆ ₹300ಕೋಟಿ ಅಗತ್ಯ ಇದೆ</p>.<p><strong>-ಜೆ. ಲೋಕೇಶ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಂಗಮಂದಿರಗಳ ಕೊರತೆ ಹಾಗೂ ರಂಗಭೂಮಿಯ ಸಮಸ್ಯೆಗಳನ್ನು ನೀಗಿಸುವ ‘ರಂಗ ಮಂದಿರ ಪ್ರಾಧಿಕಾರ’ ರಚನೆಗೆ ಅಂತಿಮ ರೂಪುರೇಷೆಯನ್ನು ಕರ್ನಾಟಕ ನಾಟಕ ಅಕಾಡೆಮಿ ಸಿದ್ಧಪಡಿಸಿದೆ.</p>.<p>ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಂಗಮಂದಿರ ಕೊರತೆಯಿಂದಾಗಿ ರಂಗ ಚಟುವಟಿಕೆಗಳು ಕುಂಠಿತವಾಗಿವೆ. ಈ ಕಾರಣದಿಂದಾಗಿ ರಂಗಮಂದಿರ ಪ್ರಾಧಿಕಾರ ರಚಿಸಬೇಕು ಎಂಬ ಬೇಡಿಕೆ ಜೀವತಳೆದಿತ್ತು. ನಾಡಿನ ರಂಗ<br />ಕರ್ಮಿಗಳು ಹಾಗೂ ಸಾಂಸ್ಕೃತಿಕ ವಲಯದ ತಜ್ಞರ ಸಲಹೆ ಅನುಸಾರನಾಟಕ ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಂಗಮಂದಿರ ಪ್ರಾಧಿಕಾರಕ್ಕೆ ಅಂತಿಮ ಸ್ವರೂಪ ನೀಡಲಾಗಿದೆ. ‘ಕರ್ನಾಟಕ ರಂಗಮಂದಿರಗಳ ಪ್ರಾಧಿಕಾರ’ ಎಂಬ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಪ್ರಾಧಿಕಾರದ ಪ್ರಧಾನ ಕಚೇರಿಯನ್ನು ಧಾರವಾಡ ಅಥವಾ ದಾವಣಗೆರೆಯಲ್ಲಿ ನಿರ್ಮಿಸಬೇಕೆಂದು ನಿರ್ಧರಿಸಲಾಗಿದೆ. ಈ ಕರಡು ಪ್ರಸ್ತಾವನೆಯನ್ನು ಲೋಕಸಭೆ ಚುನಾವಣೆ ಬಳಿಕ ನಾಟಕ ಅಕಾಡೆಮಿಯು ಸರ್ಕಾರಕ್ಕೆ ಸಲ್ಲಿಸಲಿದೆ.</p>.<p class="Subhead">300ಆಸನಗಳ ರಂಗಮಂದಿರ: ಪ್ರತಿ ತಾಲ್ಲೂಕಿನಲ್ಲಿ 300 ಆಸನದ ಸುಸಜ್ಜಿತ ರಂಗಮಂದಿರ ನಿರ್ಮಾಣ ಮಾಡಬೇಕು ಎಂದು ಶಿಫಾರಸು ಮಾಡಿದೆ.</p>.<p>ಇದರ ಅನುಸಾರ ವೃತ್ತಿ, ಪೌರಾಣಿಕ ಹಾಗೂ ಹವ್ಯಾಸಿ ನಾಟಕಗಳ ಪ್ರದರ್ಶನಕ್ಕೆ ಆದ್ಯತೆ ನೀಡಬೇಕು ಎಂದು ಹೇಳಲಾಗಿದೆ. ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಡಳಿತ ಅನುಭವ ಹಾಗೂ ರಂಗ ಪರಿಣತಿ ಹೊಂದಿರುವವರನ್ನು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಸೂಚಿಸಲಾಗಿದೆ.</p>.<p>ರಾಜ್ಯದ ನಾಲ್ಕೂ ಕಂದಾಯ ವಿಭಾಗದಿಂದ ತಲಾ ಇಬ್ಬರಂತೆ ರಂಗಭೂಮಿಗೆ ಸಂಬಂಧಿಸಿದ 8 ಜನ ಸದಸ್ಯರ ಜತೆಗೆ ಒಟ್ಟು 15 ಸದಸ್ಯರು ಪ್ರಾಧಿಕಾರದಲ್ಲಿ ಇರಬೇಕು. ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಅಧಿಕಾರವಧಿ 5 ವರ್ಷ ಇರಬೇಕೆಂದು ಅಂಗರಚನೆಯಲ್ಲಿ ತಿಳಿಸಲಾಗಿದೆ.</p>.<p>***<br />ರಂಗಭೂಮಿ ಪ್ರಾಧಿಕಾರ ರಚನೆ ವಿಚಾರವಾಗಿ ರಂಗಕರ್ಮಿಗಳ ಸಲಹೆ ಅನುಸಾರ ಕರಡು ಅಂಗರಚನೆ ಸಿದ್ಧಗೊಳಿಸಲಾಗಿದೆ. ಇದಕ್ಕೆ ₹300ಕೋಟಿ ಅಗತ್ಯ ಇದೆ</p>.<p><strong>-ಜೆ. ಲೋಕೇಶ್, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ </strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>