‘ಇತ್ತೀಚೆಗೆ ಅಮ್ಮ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಗಲೂ ಅಪ್ಪ ದುರ್ವರ್ತನೆ ತೋರಿದ್ದರು. ಸಹಿಸಿಕೊಳ್ಳಲು ಆಗದೆ ಅಮ್ಮನಿಗೆ ಕರೆ ಮಾಡಿ ವಿಷಯ ತಿಳಿಸಿದ್ದೆ. ಇದರಿಂದ ಕೆರಳಿದ ಅಪ್ಪ, ನನ್ನ ಕುತ್ತಿಗೆ ಹಿಸುಕಿ ಕೊಲ್ಲಲು ಯತ್ನಿಸಿದ್ದರು. ಅದೇ ಸಮಯಕ್ಕೆ ಸೋದರಿಯರು ಮನೆಗೆ ಬಂದಿದ್ದರಿಂದ ನನ್ನ ಪ್ರಾಣ ಉಳಿಯಿತು. ಅಮ್ಮ ಸಂಜೆ ಮನೆಗೆ ಬರುವಷ್ಟರಲ್ಲಿ ಅಪ್ಪ ಮನೆ ತೊರೆದಿದ್ದರು. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಂತ್ರಸ್ತೆ ಮನವಿ ಮಾಡಿದ್ದಾರೆ.