ಬಳಿಕ ಸ್ಥಳಕ್ಕೆ ಬಂದ ಶಾಸಕ ಆರ್. ರೋಷನ್ ಬೇಗ್, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಪಿ. ಹರಿಶೇಖರನ್, ಪಾಲಿಕೆ ಸದಸ್ಯ ಶಕೀಲ್ ಅಹಮದ್ ಅವರು ವರ್ತಕರ ಸಮಸ್ಯೆ ಆಲಿಸಿದರು. ಮಾರುಕಟ್ಟೆ ಎದುರಿನ ಖಾಲಿ ಜಾಗದಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದರು. ಬಳಿಕ ವರ್ತಕರು ಪ್ರತಿಭಟನೆ ಹಿಂದಕ್ಕೆ ಪಡೆದರು.