‘ಆರೋಪಿಯನ್ನು ವಶಕ್ಕೆ ಪಡೆಯಲು ಸ್ಥಳೀಯ ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ. ಹೀಗಾಗಿ, ಅಲ್ಲಿನ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ’ ಎಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ತಿಳಿಸಿದರು. ‘ರವಿ ಪೂಜಾರಿ ವಿರುದ್ಧ ರಾಜ್ಯದಲ್ಲಿ 97 ಪ್ರಕರಣ ದಾಖಲಾಗಿದ್ದು, ಅವುಗಳ ಮಾಹಿತಿಯನ್ನು ಸೆನೆಗಲ್ ಭಾಷೆಗೆ ತರ್ಜುಮೆ ಮಾಡಿ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. 2007ರಲ್ಲಿ ತಿಲಕ್ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆತನನ್ನು ವಶಕ್ಕೆ ಪಡೆಯಲು ನಿರ್ಧರಿಸಿದ್ದೇವೆ’ ಎಂದರು.