ಬೆಳಿಗ್ಗೆ 11 ಗಂಟೆ ವೇಳೆಗೆ ಪ್ರಕರಣದ ವಿಚಾರಣೆಗೆ ಕೂಗಿದಾಗ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರ ಮುಂದೆ ರೇಣುಕಾಚಾರ್ಯ ಹಾಜರಾದರು. ಈ ವೇಳೆ ನ್ಯಾಯಾಧೀಶರು ಶಾಸಕರ ನಡೆಯನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ‘ಹೀಗೆ ಬೇಕಾಬಿಟ್ಟಿ ನಡೆದುಕೊಳ್ಳಬಾರದು. ನೀವೆಲ್ಲಾ ಸಾರ್ವಜನಿಕರಿಗೆ ಮಾದರಿಯಾಗಿರಬೇಕು’ ಎಂದು ಕಿವಿಮಾತು ಹೇಳಿದರು. ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮಧ್ಯಾಹ್ನದ ಕಲಾಪದಲ್ಲಿ 4 ಗಂಟೆಯ ನಂತರ ಬಿಡುಗಡೆಗೆ ಆದೇಶಿಸಿದರು.