<p><strong>ಬೆಂಗಳೂರು</strong>: ‘ಶಬ್ದ ಮಾಲಿನ್ಯ ಆರೋಪದ ಮೇರೆಗೆ ಇಂದಿರಾನಗರದ ಡಿಫೆನ್ಸ್ ಕಾಲೋನಿ ನೂರು ಅಡಿ ರಸ್ತೆಯಲ್ಲಿರುವ ಟಿಪ್ಲರ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಜಪ್ತಿ ಮಾಡಿ ವಶಕ್ಕೆ ಪಡೆಯಲಾಗಿದೆ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್ಗೆ ತಿಳಿಸಿದೆ.</p>.<p>ಮಿತಿ ಮೀರಿದ ಶಬ್ದ ಮಾಲಿನ್ಯ ಆರೋಪಕ್ಕೆ ಸಂಬಂಧಿಸಿದಂತೆ ಇಂದಿರಾನಗರದ ರಾಜ್ಕುಮಾರ್ ಪಿಳ್ಳೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ ಈ ಕುರಿತಂತೆ ಬಿಬಿಎಂಪಿಯ ಪೂರ್ವ ವಲಯದ ಜಂಟಿ ಆಯುಕ್ತ ಜಿ.ಎಂ.ರವೀಂದ್ರ ಅವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.</p>.<p class="Subhead"><strong>ಪತ್ರದಲ್ಲೇನಿದೆ?:</strong> ‘ಪಬ್, ಬಾರ್ ಅಂಡ್ ರೆಸ್ಟೋರೆಂಟ್ಗಳಿಂದ ಉಂಟಾಗುತ್ತಿರುವ ಮಿತಿ ಮೀರಿದ ಶಬ್ದ ಮಾಲಿನ್ಯ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತರು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆಗೂಡಿ ಆರೋಪ ಬಂದ ಪ್ರದೇಶಗಳ ವ್ಯಾಪ್ತಿಯಲ್ಲಿ 2017ರ ಜನವರಿ 7 ಮತ್ತು 2018ರ ಜನವರಿ 12ರಂದು ದಿಢೀರ್ ಪರಿಶೀಲನೆ ನಡೆಸಲಾಗಿದೆ’ ಎಂದು ತಿಳಿಸಲಾಗಿದೆ.</p>.<p>‘ಅಂತೆಯೇ ಹೈಕೋರ್ಟ್ ನಿರ್ದೇಶನದ ಅನುಸಾರ ಇದೇ 3ರಂದು ನಡೆಸಲಾದ ಪರಿಶೀಲನೆ ವೇಳೆಯಲ್ಲಿ ಟಿಪ್ಲರ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಶಬ್ದ ಮಾಲಿನ್ಯ ನಿಯಂತ್ರಣದ ಆಧಾರದಲ್ಲಿ ಕರ್ನಾಟಕ ಪೌರಾಡಳಿತ ಕಾಯ್ದೆ-1976ರ ಕಲಂ 321 (1) ಮತ್ತು 321 (2)ರ ಅನುಸಾರ ಜಪ್ತಿ ಮಾಡಲಾಗಿದೆ’ ಎಂದು ವಿವರಿಸಲಾಗಿದೆ. ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಶಬ್ದ ಮಾಲಿನ್ಯ ಆರೋಪದ ಮೇರೆಗೆ ಇಂದಿರಾನಗರದ ಡಿಫೆನ್ಸ್ ಕಾಲೋನಿ ನೂರು ಅಡಿ ರಸ್ತೆಯಲ್ಲಿರುವ ಟಿಪ್ಲರ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಜಪ್ತಿ ಮಾಡಿ ವಶಕ್ಕೆ ಪಡೆಯಲಾಗಿದೆ’ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೈಕೋರ್ಟ್ಗೆ ತಿಳಿಸಿದೆ.</p>.<p>ಮಿತಿ ಮೀರಿದ ಶಬ್ದ ಮಾಲಿನ್ಯ ಆರೋಪಕ್ಕೆ ಸಂಬಂಧಿಸಿದಂತೆ ಇಂದಿರಾನಗರದ ರಾಜ್ಕುಮಾರ್ ಪಿಳ್ಳೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ ಈ ಕುರಿತಂತೆ ಬಿಬಿಎಂಪಿಯ ಪೂರ್ವ ವಲಯದ ಜಂಟಿ ಆಯುಕ್ತ ಜಿ.ಎಂ.ರವೀಂದ್ರ ಅವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.</p>.<p class="Subhead"><strong>ಪತ್ರದಲ್ಲೇನಿದೆ?:</strong> ‘ಪಬ್, ಬಾರ್ ಅಂಡ್ ರೆಸ್ಟೋರೆಂಟ್ಗಳಿಂದ ಉಂಟಾಗುತ್ತಿರುವ ಮಿತಿ ಮೀರಿದ ಶಬ್ದ ಮಾಲಿನ್ಯ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಪೂರ್ವ ವಲಯದ ಜಂಟಿ ಆಯುಕ್ತರು ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆಗೂಡಿ ಆರೋಪ ಬಂದ ಪ್ರದೇಶಗಳ ವ್ಯಾಪ್ತಿಯಲ್ಲಿ 2017ರ ಜನವರಿ 7 ಮತ್ತು 2018ರ ಜನವರಿ 12ರಂದು ದಿಢೀರ್ ಪರಿಶೀಲನೆ ನಡೆಸಲಾಗಿದೆ’ ಎಂದು ತಿಳಿಸಲಾಗಿದೆ.</p>.<p>‘ಅಂತೆಯೇ ಹೈಕೋರ್ಟ್ ನಿರ್ದೇಶನದ ಅನುಸಾರ ಇದೇ 3ರಂದು ನಡೆಸಲಾದ ಪರಿಶೀಲನೆ ವೇಳೆಯಲ್ಲಿ ಟಿಪ್ಲರ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಶಬ್ದ ಮಾಲಿನ್ಯ ನಿಯಂತ್ರಣದ ಆಧಾರದಲ್ಲಿ ಕರ್ನಾಟಕ ಪೌರಾಡಳಿತ ಕಾಯ್ದೆ-1976ರ ಕಲಂ 321 (1) ಮತ್ತು 321 (2)ರ ಅನುಸಾರ ಜಪ್ತಿ ಮಾಡಲಾಗಿದೆ’ ಎಂದು ವಿವರಿಸಲಾಗಿದೆ. ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>