ಬೆಂಗಳೂರು: ವೈದ್ಯರೊಬ್ಬರ ಮನೆಯಲ್ಲಿ ₹ 8 ಲಕ್ಷ ಕಳ್ಳತನ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ನಗರದ 2ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ಪೊಲೀಸ್ ಅಧಿಕಾರಿ ಬಿ.ಕೆ.ಮಧಸೂದನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಹೆಚ್ಚಿನ ಮಾಹಿತಿ ಸಲ್ಲಿಕೆಗೆ ಪ್ರಾಸಿಕ್ಯೂಷನ್ ಕಾಲಾವಕಾಶ ಕೋರಿದ ಕಾರಣ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಲಾಗಿದೆ.