ನಾಗಶೆಟ್ಟಿ ಕೊಪ್ಪದ ನಿವಾಸಿಯಾದ ಅಪರಾಧಿ, ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಬಾಲಕಿಯನ್ನು 2015 ನವೆಂಬರ್ 27ರಂದು ಅಪಹರಿಸಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್ಪೆಕ್ಟರ್ ಜಗದೀಶ ಹಂಚಿನಾಳ, ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.