ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿಗೆ ಸಾಧಕರ ಹೆಸರು ಸೂಚಿಸಲು ಮನವಿ

Last Updated 9 ನವೆಂಬರ್ 2018, 20:45 IST
ಅಕ್ಷರ ಗಾತ್ರ

ಬೆಂಗಳೂರು: ಫೋಕಸ್ ಅಕಾಡೆಮಿ ಆಫ್ ಆರ್ಟ್ ಫೋಟೋಗ್ರಫಿ ವತಿಯಿಂದ ನೀಡುವ ‘ಟಿ.ಎನ್.ಎ. ಪೆರುಮಾಳ್ ಸ್ಮಾರಕ ರಾಷ್ಟ್ರೀಯ ಛಾಯಾಗ್ರಹಣ ಪ್ರಶಸ್ತಿ’ಗೆ ಸಾಧಕರ ಹೆಸರುಗಳನ್ನು ಸೂಚಿಸಲು ಕೋರಲಾಗಿದೆ.

ಕನಿಷ್ಠ 20 ವರ್ಷ ವನ್ಯಜೀವಿ ಸಂರಕ್ಷಣೆ ಮತ್ತು ಛಾಯಾಗ್ರಹಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 2017ರಲ್ಲಿ ನಿವೃತ್ತ ಅರಣ್ಯಾಧಿಕಾರಿ ಎಸ್.ಜಿ. ನೇಗಿನಹಾಳ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

ಅರ್ಹರಾದ ಹಿರಿಯ ಛಾಯಾಗ್ರಾಹಕರು, ವನ್ಯಜೀವಿ ಸಂರಕ್ಷಕರು ಅಥವಾ ಈ ನಿಟ್ಟಿನಲ್ಲಿ ಕೆಲಸ ಮಾಡುವ ಸಂಘ ಸಂಸ್ಥೆಗಳ ವಿವರ ಗೊತ್ತಿರುವವರು ನ. 15ರೊಳಗೆ ಮಾಹಿತಿ ನೀಡಬೇಕು ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ.ಎಸ್‌.ಶ್ರೀನಿವಾಸ್‌ ಕೋರಿದ್ದಾರೆ.

ಸಂಪರ್ಕ ಸಂಖ್ಯೆ: 96111 15221, ಇ–ಮೇಲ್: focusacademy1996@gmail.com.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT