ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಪಾಂಡುರಂಗ ಅಲಿಯಾಸ್ ಪಂಡು, ರಾತ್ರಿ 9.30ರ ಸುಮಾರಿಗೆ ಸ್ನೇಹಿತರ ಜತೆ ರಾಜಗೋಪಾಲನಗರ ಮುಖ್ಯರಸ್ತೆಯ ಸನ್ರೈಸ್ ಬಾರ್ ಬಳಿ ಸಿಗರೇಟ್ ಸೇದುತ್ತ ನಿಂತಿದ್ದ. ಮದ್ಯದ ನಶೆಯಲ್ಲಿದ್ದ ಎಲ್ಲರೂ, ಕೇಕೆ ಹಾಕಿಕೊಂಡು ಮಾತನಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು.