‘ಮದ್ಯ ಹಾಗೂ ಮಾದಕ ವ್ಯಸನಿಗಳಾದ ಆರೋಪಿಗಳು, ಖರ್ಚಿನ ಹಣಕ್ಕಾಗಿ ಸುಲಿಗೆಗೆ ಇಳಿದಿದ್ದರು. ರಾತ್ರಿಯಿಂದ ನಸುಕಿನವರೆಗೂ ವಿವಿಧ ರಸ್ತೆಗಳಲ್ಲಿ ಸುತ್ತಾಡಿ, ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ದೋಚುತ್ತಿದ್ದರು. ಈ ಗ್ಯಾಂಗ್ ವಿರುದ್ಧ ಬೊಮ್ಮನಹಳ್ಳಿ, ಮಾಗಡಿ ರಸ್ತೆ, ಶ್ರೀರಾಮಪುರ, ಸುಬ್ರಹ್ಮಣ್ಯನಗರ ಹಾಗೂ ರಾಜಾಜಿನಗರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ’ ಎಂದು ಪೊಲೀಸರು ಮಾಹಿತಿ ನೀಡಿದರು.