ವಿಷಯವನ್ನು ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಅಪರಾಧಿ ಕೊಲೆ ಬೆದರಿಕೆವೊಡ್ಡಿದ್ದ. ಕೆಲ ದಿನಗಳ ಬಳಿಕ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವಾಗಲೇ ಬಾಲಕಿ, ಪೋಷಕರಿಗೆ ವಿಷಯ ತಿಳಿಸಿದ್ದಳು. ನಂತರ ಪೋಷಕರು, ಪುಟ್ಟೇನಹಳ್ಳಿ ಠಾಣೆಗೆ ದೂರು ಕೊಟ್ಟಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.