<p><strong>ಬೆಂಗಳೂರು:</strong> ಮಗನನ್ನು ಉತ್ತಮ ಶಾಲೆಗೆ ಸೇರಿಸಬೇಕೆಂಬ ಆಶಯದಿಂದ ಪೋಷಕರು ಕಡ್ಡಾಯ ಶಿಕ್ಷಣ ಹಕ್ಕು (ಆರ್ಟಿಇ) ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಶಿಕ್ಷಣ ಇಲಾಖೆ ಶಾಲೆಯೊಂದರ ಹೆಸರು ಸೂಚಿಸಿತ್ತು. ಆದರೆ, ಆ ಶಾಲೆಯ ವಿಳಾಸ ಪೋಷಕರಿಗೆ ಇನ್ನೂ ಸಿಕ್ಕಿಲ್ಲ. ಕಾರಣ, ಆ ಶಾಲೆ ಈ ವರ್ಷ ಅಸ್ತಿತ್ವದಲ್ಲೇ ಇಲ್ಲ.</p>.<p>ಬಾಣಸವಾಡಿ ಸಮೀಪದ ಕಮ್ಮನಹಳ್ಳಿಯ ಪೋಷಕರೊಬ್ಬರು ಮಗನನ್ನು ಶಾಲೆಗೆ ದಾಖಲಿಸಲು ಆರ್ಟಿಇ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕಮ್ಮನಹಳ್ಳಿಯ ಮಾರುತಿ ವಿದ್ಯಾಲಯ ಶಾಲೆಯ ಸೀಟು ಲಭಿಸಿತ್ತು. ದಾಖಲಾತಿಗಾಗಿ ಅಲ್ಲಿಗೆ ಹೋದಾಗ ಆ ಶಾಲೆ ಈ ಶೈಕ್ಷಣಿಕ ವರ್ಷದಿಂದ(2019–20) ಮುಚ್ಚಿರುವುದು ಗೊತ್ತಾಗಿದೆ. ಹಾಗಾಗಿ ವಿದ್ಯಾರ್ಥಿಗೆ ಆರ್ಟಿಇ ಅಡಿ ಶಿಕ್ಷಣ ಪಡೆಯುವ ಅವಕಾಶ ಕೈತಪ್ಪಿದೆ.</p>.<p>‘ಮ್ಯಾಪಿಂಗ್ ಮಾಡುವಾಗ ಇಲ್ಲದ ಶಾಲೆಯನ್ನು ಆರ್ಟಿಇ ಪಟ್ಟಿಯಲ್ಲಿ ಹೇಗೆ ಸೇರಿಸಿದರು. ಇದು ಶಿಕ್ಷಣ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ’ ಎಂದು ಆರ್ಟಿಇ ಕಾರ್ಯಪಡೆಯ ಸಂಚಾಲಕ ಜಿ.ನಾಗಸಿಂಹರಾವ್ ಹರಿಹಾಯ್ದರು.</p>.<p>‘ಆಯಾ ಪ್ರದೇಶದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳನ್ನು ಸರಿಯಾಗಿ ಮ್ಯಾಪಿಂಗ್ ಮಾಡಿ ಜಾಲತಾಣಕ್ಕೆ ಅಪ್ಲೋಡ್ ಮಾಡಿಲ್ಲ. ಇದರಿಂದಾಗಿ ಹಲವಾರು ಮಕ್ಕಳು ಆರ್ಟಿಇ ಸೀಟುಗಳಿಂದ ವಂಚಿತರಾಗಿದ್ದಾರೆ. ಈ ತಪ್ಪು ಸರಿಪಡಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಈ ಲೋಪದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯಲ್ಲಿ ವಿಚಾರಿಸಿದರೆ, ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಪೋಷಕರು ತಿಳಿಸಿದರು.</p>.<p>‘ಶಾಲೆಗಳ ಮ್ಯಾಪಿಂಗ್ 2019ರ ಜನವರಿಯಲ್ಲಿ ನಡೆದಿತ್ತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಮಾರುತಿ ವಿದ್ಯಾಲಯ (ಅನುದಾನಿತ ಶಾಲೆ) ಕಾರ್ಯನಿರ್ವಹಿಸುತ್ತಿತ್ತು. ಹಾಗಾಗಿ ಮ್ಯಾಪಿಂಗ್ನಲ್ಲಿ ಸೇರಿಸಿ ಪಟ್ಟಿ ಕಳುಹಿಸಿದ್ದೆವು. ನಾಲ್ಕೇ ವಿದ್ಯಾರ್ಥಿಗಳಿದ್ದ ಕಾರಣ ಆ ಶಾಲೆಯನ್ನು ಮುಚ್ಚಲಾಗಿದೆ. ಹಾಗಾಗಿ ಗೊಂದಲ ಉಂಟಾಗಿರಬಹುದು’ ಎಂದು ಬಿಇಒ ಪ್ರಭಾ ಅಲೆಕ್ಸಾಂಡರ್ ವಿವರಿಸಿದರು.</p>.<p>‘ತೊಂದರೆಗೊಳಗಾಗ ಪೋಷಕರು ಕಚೇರಿಗೆ ಬಂದರೆ ಸಮಸ್ಯೆ ಬಗೆಹರಿಸಿಕೊಡುತ್ತೇವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಗನನ್ನು ಉತ್ತಮ ಶಾಲೆಗೆ ಸೇರಿಸಬೇಕೆಂಬ ಆಶಯದಿಂದ ಪೋಷಕರು ಕಡ್ಡಾಯ ಶಿಕ್ಷಣ ಹಕ್ಕು (ಆರ್ಟಿಇ) ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಶಿಕ್ಷಣ ಇಲಾಖೆ ಶಾಲೆಯೊಂದರ ಹೆಸರು ಸೂಚಿಸಿತ್ತು. ಆದರೆ, ಆ ಶಾಲೆಯ ವಿಳಾಸ ಪೋಷಕರಿಗೆ ಇನ್ನೂ ಸಿಕ್ಕಿಲ್ಲ. ಕಾರಣ, ಆ ಶಾಲೆ ಈ ವರ್ಷ ಅಸ್ತಿತ್ವದಲ್ಲೇ ಇಲ್ಲ.</p>.<p>ಬಾಣಸವಾಡಿ ಸಮೀಪದ ಕಮ್ಮನಹಳ್ಳಿಯ ಪೋಷಕರೊಬ್ಬರು ಮಗನನ್ನು ಶಾಲೆಗೆ ದಾಖಲಿಸಲು ಆರ್ಟಿಇ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕಮ್ಮನಹಳ್ಳಿಯ ಮಾರುತಿ ವಿದ್ಯಾಲಯ ಶಾಲೆಯ ಸೀಟು ಲಭಿಸಿತ್ತು. ದಾಖಲಾತಿಗಾಗಿ ಅಲ್ಲಿಗೆ ಹೋದಾಗ ಆ ಶಾಲೆ ಈ ಶೈಕ್ಷಣಿಕ ವರ್ಷದಿಂದ(2019–20) ಮುಚ್ಚಿರುವುದು ಗೊತ್ತಾಗಿದೆ. ಹಾಗಾಗಿ ವಿದ್ಯಾರ್ಥಿಗೆ ಆರ್ಟಿಇ ಅಡಿ ಶಿಕ್ಷಣ ಪಡೆಯುವ ಅವಕಾಶ ಕೈತಪ್ಪಿದೆ.</p>.<p>‘ಮ್ಯಾಪಿಂಗ್ ಮಾಡುವಾಗ ಇಲ್ಲದ ಶಾಲೆಯನ್ನು ಆರ್ಟಿಇ ಪಟ್ಟಿಯಲ್ಲಿ ಹೇಗೆ ಸೇರಿಸಿದರು. ಇದು ಶಿಕ್ಷಣ ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ’ ಎಂದು ಆರ್ಟಿಇ ಕಾರ್ಯಪಡೆಯ ಸಂಚಾಲಕ ಜಿ.ನಾಗಸಿಂಹರಾವ್ ಹರಿಹಾಯ್ದರು.</p>.<p>‘ಆಯಾ ಪ್ರದೇಶದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳನ್ನು ಸರಿಯಾಗಿ ಮ್ಯಾಪಿಂಗ್ ಮಾಡಿ ಜಾಲತಾಣಕ್ಕೆ ಅಪ್ಲೋಡ್ ಮಾಡಿಲ್ಲ. ಇದರಿಂದಾಗಿ ಹಲವಾರು ಮಕ್ಕಳು ಆರ್ಟಿಇ ಸೀಟುಗಳಿಂದ ವಂಚಿತರಾಗಿದ್ದಾರೆ. ಈ ತಪ್ಪು ಸರಿಪಡಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ಈ ಲೋಪದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯಲ್ಲಿ ವಿಚಾರಿಸಿದರೆ, ಸರಿಯಾಗಿ ಸ್ಪಂದಿಸುತ್ತಿಲ್ಲ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಪೋಷಕರು ತಿಳಿಸಿದರು.</p>.<p>‘ಶಾಲೆಗಳ ಮ್ಯಾಪಿಂಗ್ 2019ರ ಜನವರಿಯಲ್ಲಿ ನಡೆದಿತ್ತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಮಾರುತಿ ವಿದ್ಯಾಲಯ (ಅನುದಾನಿತ ಶಾಲೆ) ಕಾರ್ಯನಿರ್ವಹಿಸುತ್ತಿತ್ತು. ಹಾಗಾಗಿ ಮ್ಯಾಪಿಂಗ್ನಲ್ಲಿ ಸೇರಿಸಿ ಪಟ್ಟಿ ಕಳುಹಿಸಿದ್ದೆವು. ನಾಲ್ಕೇ ವಿದ್ಯಾರ್ಥಿಗಳಿದ್ದ ಕಾರಣ ಆ ಶಾಲೆಯನ್ನು ಮುಚ್ಚಲಾಗಿದೆ. ಹಾಗಾಗಿ ಗೊಂದಲ ಉಂಟಾಗಿರಬಹುದು’ ಎಂದು ಬಿಇಒ ಪ್ರಭಾ ಅಲೆಕ್ಸಾಂಡರ್ ವಿವರಿಸಿದರು.</p>.<p>‘ತೊಂದರೆಗೊಳಗಾಗ ಪೋಷಕರು ಕಚೇರಿಗೆ ಬಂದರೆ ಸಮಸ್ಯೆ ಬಗೆಹರಿಸಿಕೊಡುತ್ತೇವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>