ರವೀಂದ್ರ ನಗರ ಕಡೆಯಿಂದ ಶೆಟ್ಟಿಹಳ್ಳಿ ಕಡೆ ಹೋಗುವ ರಸ್ತೆಯಲ್ಲಿ ಆರು ಮಂದಿ ಚಾಕು, ರಾಡು, ಖಾರದ ಪುಡಿಯ ಪೊಟ್ಟಣ ಮತ್ತು ಮರದ ದೊಣ್ಣೆ ಹಿಡಿದುಕೊಂಡು ದರೋಡೆ ಮಾಡಲು ಸಂಚು ರೂಪಿಸುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಒಬ್ಬ ತಲೆಮರೆಸಿಕೊಂಡಿದ್ದಾನೆ. ತುಮಕೂರು ನಗರದ ತಿಲಕ್ಪಾರ್ಕ್, ಬೆಂಗಳೂರಿನ ಸಂಜಯ ನಗರ, ನಂದಿನಿ ಲೇಔಟ್, ಎಚ್.ಎಸ್.ಆರ್ ಲೇಔಟ್, ಕೋಣ ನಕುಂಟೆ, ಬ್ಯಾಡರಹಳ್ಳಿ ಮತ್ತು ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ವಾಹನ ಕಳವು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿರುವುದು ಗೊತ್ತಾಗಿದೆ.