‘ರಾಜಾಜಿನಗರ, ಮೆಜೆಸ್ಟಿಕ್ನಂತಹ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳು ಒಂದಕ್ಕೊಂದು ತಾಗಿಕೊಂಡಂತೆ ಇವೆ. ಇಂತಹ ಕಡೆ ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಸುವುದು ಕಷ್ಟಸಾಧ್ಯ. ಆದರೆ, ಇಂತಹ ಕಡೆಯೂ ಪ್ರತಿ ಕಟ್ಟಡದಲ್ಲೂ ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಸಿಕೊಂಡಿರುವುದನ್ನು ಖಾತರಿಪಡಿಸಿಕೊಳ್ಳಲು ಮಂಡಳಿ ಮುಂದಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಜಲಮಂಡಳಿ ಅಧಿಕಾರಿಯೊಬ್ಬರು ತಿಳಿಸಿದರು.