‘ಸಮ್ಮೇಳನವನ್ನು ಹೆಬ್ಬಾಳ ಶಾಸಕ ಬಿ.ಎಸ್.ಸುರೇಶ್ ಉದ್ಘಾಟಿಸಲಿದ್ದಾರೆ.ಮೊದಲನೆ ದಿನ ಮಧ್ಯಾಹ್ನಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಗೆ ಗಾಂಧೀಜಿಯವರ 150 ವರ್ಷಾಚರಣೆ ಸ್ಮರಣಾರ್ಥ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ ಅವರು ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಹಿಂದೂಸ್ತಾನ್ ಗೋಲ್ಡ್ ಕಂಪನಿಯ ಸಂಸ್ಥಾಪಕ ಎಂ.ಶರೀಫ್ ಅವರು ಪುಸ್ತಕ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ’ ಎಂದು ಹೇಳಿದರು.