ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪಿಗೆ ರಸ್ತೆ: ವಾಹನ ಸಂಚಾರ ನಿಷೇಧ

Last Updated 31 ಅಕ್ಟೋಬರ್ 2018, 20:10 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆ 18ನೇ ಅಡ್ಡರಸ್ತೆ ಜಂಕ್ಷನ್ ಬಳಿ ‘ಗೋಕಾಕ್ ಚಳವಳಿ ಸ್ಮರಣಾರ್ಥ ವೃತ್ತ’ ಹಾಗೂ ‘ಡಾ.ರಾಜಕುಮಾರ’ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆವರೆಗೂ ಸಂಪಿಗೆ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಮಾರಂಭದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ನಟ–ನಟಿಯರು ಭಾಗವಹಿಸುವರು.

‘ಸಾರ್ವಜನಿಕರಿಗೆ ತೊಂದರೆ ಆಗದಂತೆ ಬದಲಿ ಮಾರ್ಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದು ಮಲ್ಲೇಶ್ವರ ಪೊಲೀಸರು ಹೇಳಿದರು.

ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

* ಮಲ್ಲೇಶ್ವರದ ಸಂಪಿಗೆ ರಸ್ತೆಯಿಂದ ಯಶವಂತಪುರ ಕಡೆಗೆ ಹೋಗುವ ವಾಹನಗಳು ಸಂಪಿಗೆ ರಸ್ತೆಯ 15ನೇ ಅಡ್ಡರಸ್ತೆಯಲ್ಲಿ ಎಡತಿರುವು ಪಡೆದು 8ನೇ ಮುಖ್ಯರಸ್ತೆಯ ಮೂಲಕ ಹೋಗಬಹುದು

* ಸ್ಯಾಂಕಿ ರಸ್ತೆ ಕಡೆಗೆ ಹೋಗುವ ವಾಹನಗಳು ಮಾರ್ಗೋಸಾ ರಸ್ತೆಯ 18ನೇ ಅಡ್ಡರಸ್ತೆಯಲ್ಲಿ ಎಡ ತಿರುವು ಪಡೆದು ಸದಾಶಿವನಗರದ ಭಾಷ್ಯಂ ವೃತ್ತದ ಮೂಲಕ ತಲುಪಬಹುದು. ಅಲ್ಲದೆ ಸಂಪಿಗೆ ರಸ್ತೆ 15ನೇ ಅಡ್ಡರಸ್ತೆಯಲ್ಲಿ ಬಲ ತಿರುವು ಪಡೆದು ಕೂಡ ಹೋಗಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT