‘ಈ ಹಿಂದೆ ಬಿ. ಎಸ್. ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರ ಬಗ್ಗೆ ಹಗುರಾಗಿ ಮಾತನಾಡುತ್ತಿದ್ದರು. ಜೆಡಿಎಸ್ನಲ್ಲಿದ್ದಾಗ ಜಗದೀಶ ಶೆಟ್ಟರ್ ಮತ್ತು ಪ್ರಹ್ಲಾದ ಜೋಷಿ ಅವರನ್ನು ಶೆಟ್ಟಿ-ಭಟ್ಟ ಕೂಡಿ ರಾಜ್ಯವನ್ನು ಮೂರಾಬಟ್ಟಿ ಮಾಡಿದ್ದಾರೆ ಎಂದು ಬಹಿರಂಗವಾಗಿ ಟೀಕೆ ಮಾಡುತ್ತಿದ್ದರು. ಪ್ರಧಾನಿ ನರೆಂದ್ರ ಮೋದಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರಿಗೂ ಬಾಯಿಗೆ ಬಂದಂತೆ ಮಾತಾಡಿದ್ದಾರೆ. ಈಗ ಮುರುಗೇಶ ನಿರಾಣಿ ವಿರುದ್ಧ ಹೇಳಿಕೆ ನೀಡುವ ಕೆಟ್ಟ ಚಾಳಿ ಮುಂದುವರೆದ್ದಾರೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.