‘ಅತ್ಯಾಚಾರಕ್ಕೆ ಒಳಗಾದ ತನ್ನ ಮಗಳಿಗಾಗಿ ನ್ಯಾಯ ಕೇಳಿದ ತಂದೆಯ ಮೇಲೆ ನಡೆದ ದೌರ್ಜನ್ಯ ಇಡೀ ಮಾನವ ಕುಲವೇ ತಲೆತಗ್ಗಿಸುವಂಥದ್ದು. ಬಿಜೆಪಿ ಆಡಳಿತದಲ್ಲಿ ತಲೆದೋರಿರುವ ಅರಾಜಕತೆ, ಮಹಿಳೆಯರ ಮೇಲಿನ ದೌರ್ಜನ್ಯ, ಕಾನೂನು ಮತ್ತು ಸುವ್ಯವಸ್ಥೆಗೆ ಬಂದೊದಗಿರುವ ಧಕ್ಕೆಗಳ ವಿರುದ್ಧವೂ ಪ್ರಧಾನಿ ಮೋದಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ನಂಬಿದ್ದೇನೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.