‘ವಿಜ್ಞಾನವನ್ನು ದೇಶದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಬೇಕು. ಆದರೆ, ಬದಲಾದ ಸನ್ನಿವೇಶದಲ್ಲಿ ವಿಜ್ಞಾನ ಕ್ಷೇತ್ರಕ್ಕೆ ಸಹ ರಾಜಕೀಯ ಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಎಚ್ಚರವಹಿಸಬೇಕಾಗಿದೆ. ವಿಜ್ಞಾನ ಕ್ಷೇತ್ರಕ್ಕೆ ಸೂಕ್ತ ಆದ್ಯತೆ ದೊರೆತಲ್ಲಿ ಸಹಜವಾಗಿಯೇ ದೇಶ ಅಭಿವೃದ್ಧಿಯೆಡೆಗೆ ಹೆಜ್ಜೆ ಹಾಕಲಿದೆ. ಹಾಗಾಗಿ ವೈಜ್ಞಾನಿಕ ಆಲೋಚನೆಗಳು ಅನುಷ್ಠಾನವಾಗಲು ವಿಜ್ಞಾನಿಗಳು ರಾಜಕೀಯ ಪ್ರವೇಶಿಸುವುದರಲ್ಲಿ ತಪ್ಪಿಲ್ಲ’ ಎಂದು ತಿಳಿಸಿದರು.