‘ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ, ದೇಶದ ಅಖಂಡತೆ ಹಾಗೂ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವುದಾಗಿ ಹೇಳಿದ್ದರು. ದೇಶದ ಬಗ್ಗೆ ಅವರಿಗೆ ಇರುವ ಕಾಳಜಿ ಇದೇನಾ? ಕುಮಾರಸ್ವಾಮಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಅಪರಾಧ ಸಂಚನ್ನು ಮುಚ್ಚಿಟ್ಟ (ಐಪಿಸಿ 123) ಹಾಗೂ ದೇಶದ್ರೋಹದ (121ಎ) ಆರೋಪಗಳಡಿ ಎಫ್ಐಆರ್ ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಮನವಿ ಮಾಡಿದ್ದಾರೆ.