ಸೋಮವಾರ ಬೆಳಿಗ್ಗೆ 10ಕ್ಕೆ ತಿಂಡಿ ತಿಂದು, ಹಳೇ ನಿಜಗಲ್ ಬಳಿಯ ಕೋಡಿ ಸಿದ್ದೇಶ್ವರ ದೇವಾಲಯದ ಸ್ವಚ್ಛತೆಗೆ ಎಲ್ಲಾ ವಿದ್ಯಾರ್ಥಿಗಳು 11ಕ್ಕೆ ಬಂದಿದ್ದರು. ಈ ಸಮಯದಲ್ಲಿ ಮೃತರು ಸೆಲ್ಫಿ ತೆಗೆದುಕೊಳ್ಳಲು ಕೆರೆಗೆ ಹೋಗಿದ್ದರು. ಮೊದಲಿಗೆ ಪೂರ್ಣಚಂದ್ರ ಜಾರಿ ನೀರಿಗೆ ಬಿದ್ದ. ಆತನನ್ನು ರಕ್ಷಣೆ ಮಾಡಲು ಹೋದ ಮೊಹಮ್ಮದ್ ಮೂರ್ತಜ್, ಶಶಾಂಕ್ ಕೂಡ ಬಿದ್ದರು.