‘ದೂರಿನ ಅನ್ವಯ ಏ.3ರಂದು ಸ್ಥಳ ಪರಿಶೀಲನೆ ನಡೆಸಲಾಗಿದ್ದು, ವೀಣಾ ಅವರ ಆರೋಪಕ್ಕೆ ಕೆಲವು ಪುರಾವೆಗಳು ಸಿಕ್ಕಿವೆ. ಹೀಗಾಗಿ, ಕಾನೂನು ಉಲ್ಲಂಘಿಸಿ ಕಾರ್ಮಿಕರನ್ನು ಟ್ಯಾಂಕ್ಗೆ ಇಳಿಸಿದ್ದ ಅಪಾರ್ಟ್ಮೆಂಟ್ ಸಮುಚ್ಚಯದ ಕಾರ್ಯದರ್ಶಿ ಅನಿಜಿತ್ ಶೆಟ್ಟಿ ಹಾಗೂ ಅಲ್ಲಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶಶಿಧರ್ ಜೋಷಿ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ರವಿಕುಮಾರ್ ದೂರು ಕೊಟ್ಟಿದ್ದಾರೆ.