ಅರ್ಜಿದಾರರ ಪರ ವಕೀಲ ಎಸ್.ಬಸವರಾಜ್ ವಾದ ಮಂಡಿಸಿ, ‘ಓಕಳಿಪುರಂ ಜಂಕ್ಷನ್ನಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುವಾಗುವಂತೆ ರೈಲ್ವೆ ಸಚಿವಾಲಯ ಹಾಗೂ ಪಾಲಿಕೆ ಸುಮಾರು ₹ 200 ಕೋಟಿ ವೆಚ್ಚದಲ್ಲಿ ಜಂಟಿಯಾಗಿ ಕಾರಿಡಾರ್ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿವೆ. ಆದರೆ, ಈ ಕಾಮಗಾರಿಗೆ ಶನಿ ದೇವಾಲಯ ಅಡ್ಡಿಯಾಗಿದೆ. ಇದನ್ನು ತೆರವುಗೊಳಿಸಲು ಕೆಲವು ಪ್ರಭಾವಿ ಶಕ್ತಿಗಳು ಅಡ್ಡಿಯುಂಟು ಮಾಡುತ್ತಿವೆ’ ಎಂದು ಆರೋಪಿಸಿದರು.