<p><strong>ಬೆಂಗಳೂರು:</strong> ಅದ್ವೈತ ತತ್ವವನ್ನು ಪ್ರತಿಪಾದಿಸಿದ ಆದಿ ಗುರು ಶಂಕರಾಚಾರ್ಯರ ಜಯಂತಿಯನ್ನು ಭಕ್ತಿ ಭಾವದಿಂದ ನಗರದ ವಿವಿಧೆಡೆ ಗುರುವಾರ ಆಚರಿಸಲಾಯಿತು.</p>.<p>ಶಂಕರಪುರದ ಶೃಂಗೇರಿ ಶಂಕರಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶತರುದ್ರಾಭಿಷೇಕದ ಬಳಿಕ ಶಂಕರಾಚಾರ್ಯರ ಪ್ರತಿಮೆಯನ್ನು ಹೊತ್ತ ರಥಮಠದ ಆವರಣದಿಂದಚಾಮರಾಜಪೇಟೆಯ ಪ್ರಮುಖ ಬೀದಿಗಳಲ್ಲಿ ಸಾಗಿತು. ನಗರದ ವಿವಿಧ ಭಾಗಗಳಿಂದ ಬಂದಿದ್ದ ಮಠದ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು.</p>.<p>ಶೃಂಗೇರಿ ಮಠದ ವಿದ್ಯಾಭಿನವ ಶಂಕರಭಾರತೀ ಸ್ವಾಮೀಜಿ, ಓಂಕಾರಾಶ್ರಮದ ಮಧುಸೂದನಾನಂದಪುರಿ ಸ್ವಾಮೀಜಿ, ಪಾವಗಡ ರಾಮಕೃಷ್ಣ ಸೇವಾಶ್ರಮದ ಜಪಾನಂದಜೀ ಮಹಾರಾಜ್, ಶತಾವಧಾನಿ ಆರ್.ಗಣೇಶ್, ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ, ಶಿಕ್ಷಣತಜ್ಞಡಾ.ಕೆ.ಪಿ.ಪುತ್ತೂರಾಯ ಭಾಗವಹಿಸಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಯನ ಸಭಾಂಗಣದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಿತು.</p>.<p>ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ಮತ್ತು ತಂಡದವರು ಸಿಂಧೂ ಭೈರವಿ, ಮೋಹನ ಸೇರಿದಂತೆ ವಿವಿಧ ರಾಗಗಳಲ್ಲಿ ಶಂಕರಾಚಾರ್ಯರ ಸ್ತೋತ್ರಗಳನ್ನು ಪ್ರಸ್ತುತಪಡಿಸಿದರು.</p>.<p>‘ಶಂಕರಾಚಾರ್ಯರು ಒಂದು ಸಮುದಾಯಕ್ಕೆ ಸೀಮಿತ ರಾದವರಲ್ಲ. ಅಪಾರ ಜ್ಞಾನ ಭಂಡಾರವನ್ನು ಹೊಂದಿದ್ದ ಅವರು ಅಲ್ಪಾವಧಿಯಲ್ಲೇ ಶ್ರೇಷ್ಠ ಸಾಧನೆ ಮಾಡಿದ್ದರು. ಇಂತಹ ಮಹಾನ್ ಸಾಧಕರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲ ನಡೆಯೋಣ’ ಎಂದು ಇಲಾಖೆಯ ನಿರ್ದೇಶಕಿ ಕೆ.ಎಂ. ಜಾನಕಿ ಹೇಳಿದರು.</p>.<p>ಇಲಾಖೆಯ ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ, ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಸಿದ್ರಾಮ ಸಿಂಧೆ ಇದ್ದರು.</p>.<p>ಜಯನಗರದ 3ನೇ ಬ್ಲಾಕ್ನಲ್ಲಿರುವ ಶಂಕರ ಜಯಂತಿ ಮಂಡಳಿಯ ಕೇಂದ್ರದಲ್ಲಿ ಸಾಮೂಹಿಕ ಸ್ತೋತ್ರ ಪಠಣ ಮಾಡಲಾಯಿತು. ಬಳಿಕ ಶಂಕರ ಭಗವತ್ಪಾದರ ಭಾವಚಿತ್ರದ ರಾಜಬೀದಿ ಉತ್ಸವ ನಡೆಸಲಾಯಿತು. ಈ ವೇಳೆ ಭಕ್ತಾಧಿಗಳು ಸಾಮೂಹಿಕವಾಗಿ ಶಂಕರರ ಸ್ತೋತ್ರ ಪಠಿಸಿದರು.</p>.<p>ರಾಜಾಜಿನಗರದಲ್ಲಿ ತ್ಯಾಗರಾಜ ಗಾನಸಭಾ ಬಾಲಮೋಹನ ವಿದ್ಯಾಮಂದಿರದಲ್ಲಿ ನಡೆದ ಸಂಗೀತೋತ್ಸವದಲ್ಲಿ ಡಾ.ಕೆ. ವರದರಂಗನ್ ಹಾಡಿದರು. ಸಂಗೀತ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀರಾಂಪುರದ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಶಂಕರ ಜಯಂತಿ ಬ್ರಾಹ್ಮಣ ಸಭಾ, ತ್ಯಾಗರಾಜ ನಗರದ ಆಧ್ಯಾತ್ಮ ಪ್ರಕಾಶನ ಕಾರ್ಯಾಲಯದಲ್ಲಿ ಆಚರಣೆಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅದ್ವೈತ ತತ್ವವನ್ನು ಪ್ರತಿಪಾದಿಸಿದ ಆದಿ ಗುರು ಶಂಕರಾಚಾರ್ಯರ ಜಯಂತಿಯನ್ನು ಭಕ್ತಿ ಭಾವದಿಂದ ನಗರದ ವಿವಿಧೆಡೆ ಗುರುವಾರ ಆಚರಿಸಲಾಯಿತು.</p>.<p>ಶಂಕರಪುರದ ಶೃಂಗೇರಿ ಶಂಕರಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶತರುದ್ರಾಭಿಷೇಕದ ಬಳಿಕ ಶಂಕರಾಚಾರ್ಯರ ಪ್ರತಿಮೆಯನ್ನು ಹೊತ್ತ ರಥಮಠದ ಆವರಣದಿಂದಚಾಮರಾಜಪೇಟೆಯ ಪ್ರಮುಖ ಬೀದಿಗಳಲ್ಲಿ ಸಾಗಿತು. ನಗರದ ವಿವಿಧ ಭಾಗಗಳಿಂದ ಬಂದಿದ್ದ ಮಠದ ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು.</p>.<p>ಶೃಂಗೇರಿ ಮಠದ ವಿದ್ಯಾಭಿನವ ಶಂಕರಭಾರತೀ ಸ್ವಾಮೀಜಿ, ಓಂಕಾರಾಶ್ರಮದ ಮಧುಸೂದನಾನಂದಪುರಿ ಸ್ವಾಮೀಜಿ, ಪಾವಗಡ ರಾಮಕೃಷ್ಣ ಸೇವಾಶ್ರಮದ ಜಪಾನಂದಜೀ ಮಹಾರಾಜ್, ಶತಾವಧಾನಿ ಆರ್.ಗಣೇಶ್, ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ, ಶಿಕ್ಷಣತಜ್ಞಡಾ.ಕೆ.ಪಿ.ಪುತ್ತೂರಾಯ ಭಾಗವಹಿಸಿದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಯನ ಸಭಾಂಗಣದಲ್ಲಿ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಿತು.</p>.<p>ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ಮತ್ತು ತಂಡದವರು ಸಿಂಧೂ ಭೈರವಿ, ಮೋಹನ ಸೇರಿದಂತೆ ವಿವಿಧ ರಾಗಗಳಲ್ಲಿ ಶಂಕರಾಚಾರ್ಯರ ಸ್ತೋತ್ರಗಳನ್ನು ಪ್ರಸ್ತುತಪಡಿಸಿದರು.</p>.<p>‘ಶಂಕರಾಚಾರ್ಯರು ಒಂದು ಸಮುದಾಯಕ್ಕೆ ಸೀಮಿತ ರಾದವರಲ್ಲ. ಅಪಾರ ಜ್ಞಾನ ಭಂಡಾರವನ್ನು ಹೊಂದಿದ್ದ ಅವರು ಅಲ್ಪಾವಧಿಯಲ್ಲೇ ಶ್ರೇಷ್ಠ ಸಾಧನೆ ಮಾಡಿದ್ದರು. ಇಂತಹ ಮಹಾನ್ ಸಾಧಕರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲ ನಡೆಯೋಣ’ ಎಂದು ಇಲಾಖೆಯ ನಿರ್ದೇಶಕಿ ಕೆ.ಎಂ. ಜಾನಕಿ ಹೇಳಿದರು.</p>.<p>ಇಲಾಖೆಯ ಜಂಟಿ ನಿರ್ದೇಶಕಿ ಬನಶಂಕರಿ ಅಂಗಡಿ, ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಸಿದ್ರಾಮ ಸಿಂಧೆ ಇದ್ದರು.</p>.<p>ಜಯನಗರದ 3ನೇ ಬ್ಲಾಕ್ನಲ್ಲಿರುವ ಶಂಕರ ಜಯಂತಿ ಮಂಡಳಿಯ ಕೇಂದ್ರದಲ್ಲಿ ಸಾಮೂಹಿಕ ಸ್ತೋತ್ರ ಪಠಣ ಮಾಡಲಾಯಿತು. ಬಳಿಕ ಶಂಕರ ಭಗವತ್ಪಾದರ ಭಾವಚಿತ್ರದ ರಾಜಬೀದಿ ಉತ್ಸವ ನಡೆಸಲಾಯಿತು. ಈ ವೇಳೆ ಭಕ್ತಾಧಿಗಳು ಸಾಮೂಹಿಕವಾಗಿ ಶಂಕರರ ಸ್ತೋತ್ರ ಪಠಿಸಿದರು.</p>.<p>ರಾಜಾಜಿನಗರದಲ್ಲಿ ತ್ಯಾಗರಾಜ ಗಾನಸಭಾ ಬಾಲಮೋಹನ ವಿದ್ಯಾಮಂದಿರದಲ್ಲಿ ನಡೆದ ಸಂಗೀತೋತ್ಸವದಲ್ಲಿ ಡಾ.ಕೆ. ವರದರಂಗನ್ ಹಾಡಿದರು. ಸಂಗೀತ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀರಾಂಪುರದ ರಾಘವೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಶಂಕರ ಜಯಂತಿ ಬ್ರಾಹ್ಮಣ ಸಭಾ, ತ್ಯಾಗರಾಜ ನಗರದ ಆಧ್ಯಾತ್ಮ ಪ್ರಕಾಶನ ಕಾರ್ಯಾಲಯದಲ್ಲಿ ಆಚರಣೆಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>