‘ರಾಜ್ಯದ 156 ತಾಲ್ಲೂಕುಗಳಲ್ಲಿ ಬರಗಾಲವಿದೆ. ರೈತರ ಆತ್ಮಹತ್ಯೆ ಮುಂದುವರಿದಿದೆ. ಇಂಥ ವಿಚಿತ್ರ ಪರಿಸ್ಥಿತಿಯನ್ನು ರಾಜ್ಯ ಎದುರಿಸುತ್ತಿದೆ. ಇದಕ್ಕೆ ಯಾರನ್ನು ದೂಷಿಸಿಯೂ ಪ್ರಯೋಜನವಿಲ್ಲ’ ಎಂದು ಮಾರ್ಮಿಕವಾಗಿ ನುಡಿದ ಯಡಿಯೂರಪ್ಪ, ‘ಕೆರೆ ಕಟ್ಟೆಗಳು ತುಂಬಿ, ಬೆಳೆಗೆ ಸರಿಯಾದ ಬೆಲೆ ಸಿಗುವವರೆಗೆ ಯಾರೂ ಕೃಷಿಯತ್ತ ಮುಖ ಮಾಡುವುದಿಲ್ಲ. ಹಳ್ಳಿಯ ಯುವಜನರು ಕೃಷಿಯಿಂದ ವಿಮುಖರಾಗಿ ನಗರಗಳಿಗೆ ಬಂದು ಉದ್ಯೋಗವಿಲ್ಲದೇ ಅಲೆಯುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.