ಆರೋಪಿಗಳು ಮಾಗಡಿ ರಸ್ತೆಯ ಬಳಿ ಓಡಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ಬುಧವಾರ ಮಾಹಿತಿ ಬಂದಿತ್ತು. ಈ ಮಾಹಿತಿ ಆಧರಿಸಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಮಾಚೋಹಳ್ಳಿ ಫಾರೆಸ್ಟ್ ಗೇಟ್ ಬಳಿ ಆರೋಪಿಗಳನ್ನು ಪತ್ತೆ ಹಚ್ಚಿದ್ದರು. ಬಂಧಿಸಲು ಮುಂದಾದಾಗ ಕಾನ್ಸ್ಟೆಬಲ್ ಮನಗುಂಡಿ ಹಾಗೂ ಪಿಎಸ್ಐ ಮುರಳಿ ಎಂಬುವರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು. ಈ ವೇಳೆ ಆರೋಪಿಗಳ ಕಾಲಿಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತ್ಯನಾರಾಯಣ್ ಗುಂಡು ಹಾರಿಸಿದ್ದಾರೆ.