ಶನಿವಾರ ಇಲ್ಲಿ ನಡೆದ ಯುವ ಮೋರ್ಚಾ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಅವರು, ಎರಡೂ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿರುವುದನ್ನು ಆ ಪಕ್ಷಗಳ ಪ್ರಮುಖರು ಒಪ್ಪಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ಮಟ್ಟದ ನಾಯಕರು ಮಾತ್ರವಲ್ಲದೇ, ವಿಧಾನಸಭಾ ಕ್ಷೇತ್ರದ ಹಂತದಲ್ಲೂ ಪಕ್ಷ ಸೇರಲು ಮುಂದೆ ಬರುವ ಎಲ್ಲರನ್ನೂ ಸೇರಿಸಿಕೊಂಡು ಬಿಜೆಪಿಯನ್ನು ಬಲಿಷ್ಠಗೊಳಿಸಬೇಕಾಗಿದೆ ಎಂದರು.