‘ಸಮುದಾಯಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೇಳಿದರೆ, ಭೋವಿ ನಿಗಮಕ್ಕೆ ಹೋಗಿ ಕೇಳಿ ಎನ್ನುತ್ತಾರೆ. ಭೋವಿ ನಿಗಮಕ್ಕೆ ಸರ್ಕಾರ ಹೆಚ್ಚಿನ ಅನುದಾನವನ್ನೇ ನೀಡುತ್ತಿಲ್ಲ. ಆಡಳಿತ ವರ್ಗ ಸಮುದಾಯದೊಂದಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ’ ಎಂದು ಅತೃಪ್ತಿ ವ್ಯಕ್ತಪಡಿಸಿದರು. ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಗೈರುಹಾಜರಿಯನ್ನು ಟೀಕಿಸಿದ ಅವರು, ‘ಈ ಜಯಂತಿಯನ್ನು ಕಾಟಾಚಾರಕ್ಕೆ ಮಾಡಲಾಗುತ್ತಿದೆ’ ಎಂದು ದೂರಿದರು.