‘ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ, ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಹೆಲಿಕಾಪ್ಟರ್ನಲ್ಲಿ ಒಟ್ಟಾಗಿ ಹೋದರೆ ಒಗ್ಗಟ್ಟಿನ ಮಂತ್ರ ಎಂದು ಹೇಳಲಾಗದು. ಅದೆಲ್ಲ ಹೆಲಿಕಾಪ್ಟರ್ನಲ್ಲಿ ಕುಳಿತಿರುವವರೆಗೆ ಮಾತ್ರ. ಮಂಡ್ಯದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪ ಯಾಕೆ ನಡೆಯುತ್ತಿದೆ? ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಮುಂದುವರಿಯುವ ಸಾಧ್ಯತೆ ಇಲ್ಲ’ ಎಂದು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.