ಮಡಿಕೇರಿಯ ರಜಿತ್ ಮತ್ತು ಕಾಸರಗೋಡು ತಾಲ್ಲೂಕಿನ ಗ್ರಾಮವೊಂದರ ಅನುಷಾಗೆ ಮದುವೆ ನಿಶ್ಚಿತವಾಗಿತ್ತು. ಸುಳ್ಯದ ಪುರಭವನದಲ್ಲಿ ಮದುವೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. 500 ಆಹ್ವಾನ ಪತ್ರಿಕೆಗಳನ್ನು ಹಂಚಿಕೆ ಮಾಡಿದ್ದರು. ಪುರಭವನಕ್ಕೆ ಮುಂಗಡ ಹಣವನ್ನು ಪಾವತಿಸಿದ್ದರು. ಆದರೆ, ಕೊರೊನಾ ಆ ಕುಟುಂಬದ ಸಂಭ್ರಮವನ್ನೂ ಕಿತ್ತುಕೊಂಡಿದೆ. ದೇಶವೇ ಲಾಕ್ಡೌನ್ ಆಗಿದ್ದು ಮದುವೆಯ ಸ್ಥಳವೂ ಬದಲಾಗಿತ್ತು.