<p><strong>ಮಡಿಕೇರಿ</strong>: ಕೊರೊನಾದಿಂದ ಮದುವೆಗಳೂ ಸರಳವಾಗಿ ನಡೆಯುವ ಸ್ಥಿತಿ ಬಂದಿದೆ. ಇಲ್ಲಿನ ರಾಜರಾಜೇಶ್ವರಿ ದೇಗುಲದಲ್ಲಿ ಗುರುವಾರ ಕುಟುಂಬದ ಕೆಲವೇ ಮಂದಿ ಸೇರಿಕೊಂಡು ಮದುವೆ ನಡೆಸಿದ್ದಾರೆ.</p>.<p>ಮಡಿಕೇರಿಯ ರಜಿತ್ ಮತ್ತು ಕಾಸರಗೋಡು ತಾಲ್ಲೂಕಿನ ಗ್ರಾಮವೊಂದರ ಅನುಷಾಗೆ ಮದುವೆ ನಿಶ್ಚಿತವಾಗಿತ್ತು. ಸುಳ್ಯದ ಪುರಭವನದಲ್ಲಿ ಮದುವೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. 500 ಆಹ್ವಾನ ಪತ್ರಿಕೆಗಳನ್ನು ಹಂಚಿಕೆ ಮಾಡಿದ್ದರು. ಪುರಭವನಕ್ಕೆ ಮುಂಗಡ ಹಣವನ್ನು ಪಾವತಿಸಿದ್ದರು. ಆದರೆ, ಕೊರೊನಾ ಆ ಕುಟುಂಬದ ಸಂಭ್ರಮವನ್ನೂ ಕಿತ್ತುಕೊಂಡಿದೆ. ದೇಶವೇ ಲಾಕ್ಡೌನ್ ಆಗಿದ್ದು ಮದುವೆಯ ಸ್ಥಳವೂ ಬದಲಾಗಿತ್ತು.</p>.<p>ಮಡಿಕೇರಿ ನಗರದ ಹೊರವಲಯದ ರಾಜರಾಜೇಶ್ವರಿ ದೇವಾಲಯದಲ್ಲಿ ಕೇವಲ ಏಳು ಜನರು ಭಾಗಿಯಾಗಿ ಮದುವೆ ನೆರವೇರಿಸಿದರು. ವಧು- ವರರ ತಂದೆ, ತಾಯಿ ಮತ್ತು ಅರ್ಚಕರು ಮಾತ್ರವೇ ಮದುವೆಯಲ್ಲಿ ಭಾಗಿಯಾಗಿದ್ದರು.</p>.<p>‘ಕುಟುಂಬದ ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆ ಆಗಬೇಕೆಂಬ ಆಸೆಯಿತ್ತು. ಆದರೆ, ಕೊರೊನಾ ವೈರಸ್ನಿಂದ ಇಡೀ ಜಗತ್ತಿನಲ್ಲಿ ಆಂತಕ ಉಂಟಾಗಿದೆ. ಹೀಗಾಗಿ, ಈ ರೀತಿ ಸರಳವಾಗಿ ಮದುವೆ ಆಗಿದ್ದೇವೆ’ ಎಂದು ರಜಿತ್ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ಕೊರೊನಾದಿಂದ ಮದುವೆಗಳೂ ಸರಳವಾಗಿ ನಡೆಯುವ ಸ್ಥಿತಿ ಬಂದಿದೆ. ಇಲ್ಲಿನ ರಾಜರಾಜೇಶ್ವರಿ ದೇಗುಲದಲ್ಲಿ ಗುರುವಾರ ಕುಟುಂಬದ ಕೆಲವೇ ಮಂದಿ ಸೇರಿಕೊಂಡು ಮದುವೆ ನಡೆಸಿದ್ದಾರೆ.</p>.<p>ಮಡಿಕೇರಿಯ ರಜಿತ್ ಮತ್ತು ಕಾಸರಗೋಡು ತಾಲ್ಲೂಕಿನ ಗ್ರಾಮವೊಂದರ ಅನುಷಾಗೆ ಮದುವೆ ನಿಶ್ಚಿತವಾಗಿತ್ತು. ಸುಳ್ಯದ ಪುರಭವನದಲ್ಲಿ ಮದುವೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. 500 ಆಹ್ವಾನ ಪತ್ರಿಕೆಗಳನ್ನು ಹಂಚಿಕೆ ಮಾಡಿದ್ದರು. ಪುರಭವನಕ್ಕೆ ಮುಂಗಡ ಹಣವನ್ನು ಪಾವತಿಸಿದ್ದರು. ಆದರೆ, ಕೊರೊನಾ ಆ ಕುಟುಂಬದ ಸಂಭ್ರಮವನ್ನೂ ಕಿತ್ತುಕೊಂಡಿದೆ. ದೇಶವೇ ಲಾಕ್ಡೌನ್ ಆಗಿದ್ದು ಮದುವೆಯ ಸ್ಥಳವೂ ಬದಲಾಗಿತ್ತು.</p>.<p>ಮಡಿಕೇರಿ ನಗರದ ಹೊರವಲಯದ ರಾಜರಾಜೇಶ್ವರಿ ದೇವಾಲಯದಲ್ಲಿ ಕೇವಲ ಏಳು ಜನರು ಭಾಗಿಯಾಗಿ ಮದುವೆ ನೆರವೇರಿಸಿದರು. ವಧು- ವರರ ತಂದೆ, ತಾಯಿ ಮತ್ತು ಅರ್ಚಕರು ಮಾತ್ರವೇ ಮದುವೆಯಲ್ಲಿ ಭಾಗಿಯಾಗಿದ್ದರು.</p>.<p>‘ಕುಟುಂಬದ ಎಲ್ಲರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆ ಆಗಬೇಕೆಂಬ ಆಸೆಯಿತ್ತು. ಆದರೆ, ಕೊರೊನಾ ವೈರಸ್ನಿಂದ ಇಡೀ ಜಗತ್ತಿನಲ್ಲಿ ಆಂತಕ ಉಂಟಾಗಿದೆ. ಹೀಗಾಗಿ, ಈ ರೀತಿ ಸರಳವಾಗಿ ಮದುವೆ ಆಗಿದ್ದೇವೆ’ ಎಂದು ರಜಿತ್ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>